ದೇಶ- ವಿದೇಶ

ಚುನಾವಣಾ ನಿಯಮಗಳ ತಿದ್ದುಪಡಿ ಪ್ರಶ್ನಿಸಿ ರಿಟ್‌ ಅರ್ಜಿ ಸಲ್ಲಿಕೆ| ಜನವರಿ.15ಕ್ಕೆ ಅರ್ಜಿ ವಿಚಾರಣೆ: ಸುಪ್ರೀಂಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಸುಪ್ರೀಂಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.15 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದ ಪ್ರಕಾರ, ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರ ನೇತೃತ್ವದ ಪೀಠವೂ ಜನವರಿ.15ರಂದು ವಿಚಾರಣೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.

ಏನಿದು ಪ್ರಕರಣ?

ಕೇಂದ್ರ ಸರ್ಕಾರ, ಚುನಾವಣಾ ನಿಯಮದಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್‌ ದೃಶ್ಯಾವಳಿಗಳು ಹಾಗೂ ಅಭ್ಯರ್ಥಿಗಳ ವೀಡಿಯೋ ರೆಕಾರ್ಡಿಂಗ್‌ಗಳಂತಹ ಕೆಲ ಎಲೆಕ್ಟ್ರಾನಿಕ್‌ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗುವುದನ್ನು ತಡೆಯಲು ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿಯನ್ನು ಮಾಡಿತ್ತು. ಆದರೆ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಸುಪ್ರೀಂಕೋರ್ಟ್‌ ಮಾಹಿತಿಗೆ ಜೈರಾಮ್‌ ಪ್ರತಿಕ್ರಿಯೆ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರು ಸಲ್ಲಿಸಿರುವ ರಿಟ್‌ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್‌ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಿದೆ. ಅದಕ್ಕೆ ಜೈರಾಮ್‌ ಅವರು ಪ್ರತಿಕ್ರಿಯೆ ನೀಡಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ನಾಶವಾಗುತ್ತಿದೆ. ಅದನ್ನು ಪುನರ್‌ ಸ್ಥಾಪಿಸಲು ಸುಪ್ರೀಂಕೋರ್ಟ್‌ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಬೇಕು. ಅಲ್ಲದೇ ಏಕ ಪಕ್ಷೀಯವಾಗಿ ಹಾಗೂ ಸಾರ್ವಜನಿಕರ ಸಮಾಲೋಚನೆಯಿಲ್ಲದೆ ಇಂತಹ ಪ್ರಮುಖ ಕಾನೂನುಗಳನ್ನು ಲಜ್ಜೆಗೆಟ್ಟ ರೀತಿಯಲ್ಲಿ ತಿದ್ದುಪಡಿ ಮಾಡಲು ಅನುಮತಿಸುವುದಿಲ್ಲ. ಒಂದು ವೇಳೆ ಸಾರ್ವಜನಿಕರಿಗೆ ಅಗತ್ಯವಾದ ರೀತಿಯಲ್ಲಿ ಮಾಹಿತಿ ನೀಡಿ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಜವಾಬ್ದಾರಿಯಿಂದ ನಡೆಸಿದ್ದರೆ, ಆಗ ಇದಕ್ಜೆ ಅರ್ಥ ಇರುತ್ತಿತ್ತು ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago