ದೇಶ- ವಿದೇಶ

ಧಾರ್ಮಿಕ ಸ್ಥಳಗಳ ಸಮೀಕ್ಷೆ: ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದ ಸುಪ್ರಿಂ ಕೋರ್ಟ್‌

ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯಿದೆ 1991ರ ಅಡಿಯಲ್ಲಿ ಮಸೀದಿ, ಮಂದಿರ ಸೇರಿದಂತೆ ಇನ್ನಿತರ ಯಾವುದೇ ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ವಿಚಾರಣಾ ನ್ಯಾಯಾಲಯಗಳು ಆದೇಶ ನೀಡಬಾರದು ಎಂದು ಸುಪ್ರಿಂ ಕೋರ್ಟ್‌ ನಿರ್ದೇಶನ ನೀಡಿದೆ.

1991ರ ಕಾಯಿದೆಯ ಕೆಲವು ನಿಬಂಧನೆಗಳು ವಿಚಾರಣೆಗೆ ವಿರುದ್ಧವಾಗಿವೆ ಎಂದು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಆದೇಶ ನೀಡಿದೆ.

ಧಾರ್ಮಿಕ ಸ್ಥಳಗಳ ಸಮೀಕ್ಷೆಗೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿದ್ದು, ಈ ವಿಚಾರವಾಗಿ ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ ಯಾವುದೇ ಮೊಕದ್ದಮೆಗಳನ್ನು ದಾಖಲಿಸುವಂತಿಲ್ಲ. ಹಾಗೆಯೇ ಈಗ ನ್ಯಾಯಾಲಯದಲ್ಲಿರುವ ಅರ್ಜಿಗಳ ಕುರಿತಂತೆ ಪರಿಣಾಮಕಾರಿ ಆದೇಶಗಳನ್ನು ನೀಡುವಂತಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಹೇಳಿದೆ.

ಕೇಂದ್ರ ಸರ್ಕಾರ ಈ ಕುರಿತಂತೆ ತಮ್ಮ ಪ್ರತಿಕ್ರಿಯೆ ನೀಡುವವರೆಗೂ ಮುಂದಿನ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪೀಠ ಹೇಳಿದೆ. ಇದಕ್ಕೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಶೀಘ್ರದಲ್ಲೇ ಉತ್ತರ ನೀಡುತ್ತೇವೆ ಎಂದು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ.

ಈ ಆದೇಶವು ಧಾರ್ಮಿಕ ಮಾಲಿಕತ್ವವನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿರುವ ಸುಮಾರು 10ಕ್ಕೂ ಹೆಚ್ಚು ಅರ್ಜಿಗಳ ಮೇಲೆ ಪರಣಾಮ ಬೀರುತ್ತದೆ.

ಆಗಸ್ಟ್‌ 15, 1947ರಂದು ಪೂಜಾ ಧಾರ್ಮಿಕ ಸ್ಥಳಗಳು ತಮ್ಮ ಮೂಲ ನೆಲೆಯಲ್ಲಿಯೇ ಇರುತ್ತವೆ. ಎಂದು ಪೂಜಾ ಸ್ಥಳ ಕಾಯಿದೆ ಹೇಳುತ್ತದೆ. ಈ ಕಾಯಿದೆಯನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಅವರ ಅರ್ಜಿ ಸೇರಿದಂತೆ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಇನ್ನು ಬಾಕಿ ಉಳಿದಿವೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

1 hour ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

2 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

3 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

4 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

5 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

6 hours ago