ದೇಶ- ವಿದೇಶ

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಈಗ ಎಲ್ಲರ ಚಿತ್ತ ತನ್ನತ್ತ ಸೆಳೆದಿದೆ. ಬಾಕ್ಸ್ ಆಫೀಸ್ ಕಿಂಗ್ ಈಗ ಮತಪೆಟ್ಟಿಗೆಯ ಕಿಂಗ್ ಆಗ್ತಾರಾ? ಉತ್ತರಕ್ಕೆ ಮೇ 4ರವರೆಗೆ ಕಾಯಲೇಬೇಕು.

ಡಿಎಂಕೆ vs ಎಐಎಡಿಎಂಕೆ ಫೈಟ್‌ಗೆ ಬ್ರೇಕ್?
ಸ್ವಾತಂತ್ರ್ಯಾ ನಂತರ ಮೊದಲ ಬಾರಿಗೆ ಡಿಎಂಕೆ-ಎಐಎಡಿಎಂಕೆ ನೇರಾನೇರ ಕಾಳಗದ ಸೂತ್ರವನ್ನೇ ಟಿವಿಕೆ ಮುರಿಯುವ ಲಕ್ಷಣ ಕಾಣುತ್ತಿದೆ. ಹಲವು ಚುನಾವಣಾ ಸಮೀಕ್ಷೆಗಳು ವಿಜಯ್ ‘ಕಿಂಗ್ ಮೇಕರ್’ ಆಗುವುದಷ್ಟೇ ಅಲ್ಲ, ‘ಕಿಂಗ್’ ಆಗುವ ಸಾಧ್ಯತೆಯನ್ನೂ ತಳ್ಳಿಹಾಕಿಲ್ಲ.

ಆಕ್ಸಿಸ್ ಮೈ ಇಂಡಿಯಾ ಶಾಕಿಂಗ್ ವರದಿ
ಮತಗಟ್ಟೆ ಸಮೀಕ್ಷೆಯಲ್ಲಿ ನಂಬಿಕೆ ಗಳಿಸಿರುವ ಆಕ್ಸಿಸ್ ಮೈ ಇಂಡಿಯಾ ವರದಿ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ. ಟಿವಿಕೆ ಪಕ್ಷ 98ರಿಂದ 120 ಸ್ಥಾನ ಗೆದ್ದು, ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆಯನ್ನು ಮೂರನೇ ಸ್ಥಾನಕ್ಕೆ ತಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ 118 ಸ್ಥಾನ ಬೇಕು. ಒಂದು ವೇಳೆ ಸಮೀಕ್ಷೆ ನಿಜವಾದರೆ, ಮೊದಲ ಪ್ರಯತ್ನದಲ್ಲೇ ಟಿವಿಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ವಿಜಯ್ ಮುಖ್ಯಮಂತ್ರಿ ಗಾದಿಗೆ ಲಗ್ಗೆ ಇಡಬಹುದು.

ಯುವ-ಮಹಿಳಾ ವೋಟ್‌ಬ್ಯಾಂಕ್ ವಿಜಯ್ ಕಡೆಗೆ
18ರಿಂದ 39 ವರ್ಷದ ಯುವ ಮತದಾರರಲ್ಲಿ ಶೇ.38ರಷ್ಟು ಮಂದಿ ಟಿವಿಕೆ ಪರ ಒಲವು ತೋರಿದ್ದಾರೆ ಎಂದು ಸಮೀಕ್ಷೆಗಳು ಬೊಟ್ಟು ಮಾಡಿವೆ. ಮಹಿಳಾ ಮತದಾರರ ದೊಡ್ಡ ವರ್ಗವೂ ವಿಜಯ್ ಕಡೆಗೆ ವಾಲಿದೆ. ಇದು ಡಿಎಂಕೆ-ಎಐಎಡಿಎಂಕೆ ಸಾಂಪ್ರದಾಯಿಕ ವೋಟ್ ಬ್ಯಾಂಕ್‌ಗೆ ನೇರ ಹೊಡೆತ ಕೊಡಲಿದೆ ಎಂದು ವಿಶ್ಲೇಷಿಸಲಾಗಿದೆ.

ಅತಂತ್ರವಾದರೆ ವಿಜಯ್ ಕೈಯಲ್ಲಿ ಕೀಲಿಕೈ
ಟಿವಿಕೆ ಮೊದಲ ಬಾರಿ ಕಣದಲ್ಲಿರುವುದರಿಂದ ಯಾರ ಮತ ಸೆಳೆದಿದೆ ಎಂದು ಈಗಲೇ ಹೇಳುವುದು ಕಷ್ಟ. ಆದರೆ ಡಿಎಂಕೆ-ಎಐಎಡಿಎಂಕೆ ಮೈತ್ರಿಕೂಟದ ಮತಗಳಿಗೆ ಕತ್ತರಿ ಬೀಳುವುದು ಖಚಿತ. ಒಂದು ವೇಳೆ ಅತಂತ್ರ ವಿಧಾನಸಭೆ ನಿರ್ಮಾಣವಾದರೆ, 100ರ ಆಸುಪಾಸು ಶಾಸಕರೊಂದಿಗೆ ವಿಜಯ್ ‘ಕಿಂಗ್ ಮೇಕರ್’ ಆಗಿ ಯಾರಿಗೆ ಪಟ್ಟ ಕಟ್ಟಬೇಕು ಎಂಬುದನ್ನು ನಿರ್ಧರಿಸಲಿದ್ದಾರೆ.

ಸದ್ಯಕ್ಕೆ ಎಲ್ಲರ ಚಿತ್ತ ಮೇ 4ರ ಫಲಿತಾಂಶದ ಮೇಲೆ ನೆಟ್ಟಿದೆ. ದಳಪತಿಯ ರಾಜಕೀಯ ಎಂಟ್ರಿ ತಮಿಳುನಾಡಿನ ದ್ರಾವಿಡ ಲೆಕ್ಕಾಚಾರವನ್ನು ಬುಡಮೇಲು ಮಾಡುತ್ತಾ? ಕಾದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

14 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

15 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

16 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

17 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

17 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

18 hours ago