ದೇಶ- ವಿದೇಶ

ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ

ಉತ್ತರ ಪ್ರದೇಶ: ಇಲ್ಲಿನ ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿಯ ಸಂಭ್ರಮ ಸಡಗರ ಮನೆಮಾಡಿದ್ದು, ಈ ಶುಭ ಗಳಿಗೆಯಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಮಾಡಿದೆ.

ಸೂರ್ಯನ ಕಿರಣವು ನೇರವಾಗಿ ರಾಮಲಲ್ಲಾ ಮೂರ್ತಿಯ ಹಣೆಯ ಮೇಲೆ ಬಿದ್ದ ದೃಶ್ಯ ಕಂಡುಬಂದಿದೆ.

ನಿಖರವಾಗಿ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯ ರಶ್ಮಿ ದಿವ್ಯ ತಿಲಕವನ್ನು ರೂಪಿಸಿದೆ.

ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡುತ್ತಿರುವ ಬೆನ್ನಲ್ಲೇ ರಾಮಲಲ್ಲಾ ಮೂರ್ತಿಗೆ ಸೂರ್ಯ ಕಿರಣವು ಆಧ್ಮಾತ್ಮಿಕ ಹೊಳಪನ್ನು ನೀಡಿದೆ.

ರಾಮನವಮಿಯ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಇಂದು ಲಕ್ಷಾಂತರ ಮಂದಿ ಸಾರ್ವಜನಿಕರು ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ.

AddThis Website Tools
ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಾಮರಾಜನಗರ ಜಿಲ್ಲೆಯಲ್ಲಿ ಮೊದಲ ಬಾರಿ ಸಂಪುಟ ಸಭೆ

ಹಿಂದೊಮ್ಮೆ ನಡೆದಿತ್ತು ಮಿನಿ ಸಂಪುಟ ಸಭೆ; ರೇಷ್ಮೆ ಕೃಷಿ ಪುನಶ್ಚೇತನ, ಗ್ರಾಮಗಳ ಸ್ಥಳಾಂತರ ಇತ್ಯಾದಿ ಬೇಡಿಕೆಗಳ ಮಹಾಪೂರ ಪ್ರಸಾದ್ ಲಕ್ಕೂರು…

50 mins ago

ಓದುಗರ ಪತ್ರ | ಹಗಲೂ ಉರಿಯುವ ಬೀದಿ ದೀಪಗಳು

ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಗಾಯಿತ್ರಿ ಟಾಕೀಸ್‌ ಎದುರಿನ ರಾಜ ಕಾಲುವೆಯ ಬಳಿ ಇರುವ ಬೀದಿ ದೀಪ ಹಗಲಿನ ವೇಳೆಯೂ…

2 hours ago

ಪಹಲ್ಗಾಮ್‌ ದಾಳಿಗೆ ಪ್ರತೀಕಾರ: ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟ ಭಾರತ ಸರ್ಕಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ…

12 hours ago

ನಾಳೆ ಅರ್ಧ ದಿನ ಶಿವಮೊಗ್ಗ ಬಂದ್

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್‌ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ…

12 hours ago

ಹುಣಸೂರಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು: ಶಾಸಕ ಜಿ.ಡಿ.ಹರೀಶ್‌ ಗೌಡ

ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ…

12 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ…

13 hours ago