ದೇಶ- ವಿದೇಶ

ಅಕ್ರಮ ಸಂಬಂಧ ಶಂಕೆ : ವ್ತಕ್ತಿಯನ್ನು ಜೀವಂತ ಸಮಾಧಿ ಮಾಡಿದ ಪತಿ

ಚಂಡೀಗಡ : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಬಾಡಿಗೆದಾರನನ್ನು ವ್ಯಕ್ತಿಯೊಬ್ಬ 7 ಅಡಿ ಆಳದ ಗುಂಡಿಯಲ್ಲಿ ಜೀವಂತ ಸಮಾಧಿ ಮಾಡಿರುವ ಘಟನೆ ಹರಿಯಾಣದ ರೋಹ್ಟಕ್‍ನಲ್ಲಿ ನಡೆದಿದೆ.

ಮಹಿಳೆ ಮೋಹದಿಂದ ಜೀವಂತ ಸಮಾಧಿಯಾದ ವ್ಯಕ್ತಿಯನ್ನು ಯೋಗ ಶಿಕ್ಷಕ ಜಗದೀಪ್ ಎಂದು ಗುರುತಿಸಲಾಗಿದೆ. ತನ್ನ ಪತ್ನಿಯೊಂದಿಗೆ ಆಕ್ರಮ ಸಂಬಂಧ ಹೊಂದಿದ್ದ ಜಗದೀಪ್‍ನನ್ನು ಸ್ನೇಹಿತರ ಸಹಾಯದಿಂದ ಅಪಹರಿಸಿದ್ದ ಹರ್‍ದೀಪ್ ಎಂಬಾತ ತನ್ನ ಹೊಲದಲ್ಲಿ 7 ಅಡಿ ಆಳದ ಗುಂಡಿ ತೋಡಿ ಜೀವಂತವಾಗಿ ಹೂತು ಹಾಕಿದ್ದ.

ಕಳೆದ ವರ್ಷ ಡಿಸೆಂಬರ್‍ನಲ್ಲಿ ಯೋಗ ಶಿಕ್ಷಕರನ್ನು ಕೊಲೆ ಮಾಡಲಾಗಿತ್ತು.ಆದರೆ ಸುದೀರ್ಘ ತನಿಖೆ ನಂತರ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಯೋಗ ಶಿಕ್ಷಕರ ಮೃತದೇಹವನ್ನು ಹೊಲದಿಂದ ವಶಪಡಿಸಿಕೊಳ್ಳಲಾಗಿದೆ. ರೋಹ್ಟಕ್‍ನ ಬಾಬಾ ಮಸ್ತ್‍ನಾಥ್ ವಿಶ್ವವಿದ್ಯಾಲಯದಲ್ಲಿ ಯೋಗ ಶಿಕ್ಷಕರಾಗಿದ್ದವರು ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.ಅಲ್ಲಿ ಬಾಡಿಗೆ ಮನೆಯ ಓನರ್ ಜತೆ ಅಕ್ರಮ ಸಂಬಂಧ ಹೊಂದಿದ್ದರು.

ಕಳೆದ ಡಿಸೆಂಬರ್ 24 ರಂದು, ಹರ್ದೀಪ್ ಮತ್ತು ಅವನ ಕೆಲವು ಸ್ನೇಹಿತರು ಜಗದೀಪ್ ನನ್ನು ಅಪಹರಿಸಿ, ಕೈಕಾಲುಗಳನ್ನು ಕಟ್ಟಿ, ಚಾರ್ಕಿ ದಾದ್ರಿಯಲ್ಲಿರುವ ಗುಂಡಿ ಬಳಿ ಕರೆದೊಯ್ದು ಥಳಿಸಿದ್ದಾರೆ. ಜಮೀನಿನ ಬಳಿ ಹೋಗಿ ಜೀವಂತವಾಗಿ ಸುಟ್ಟು ಬಳಿಕ ಹೂತುಹಾಕಿ ಗುಂಡಿಯನ್ನು ಮಣ್ಣಿನಿಂದ ಮುಚ್ಚಿದ್ದಾರೆ.

ಕೊಲೆಯಾದ 10 ದಿನಗಳ ನಂತರ ಶಿವಾಜಿ ಕಾಲೋನಿ ಪೊಲೀಸ್ ಠಾಣೆಯಲ್ಲಿ ಜಗದೀಪ್ ನಾಪತ್ತೆ ದೂರು ದಾಖಲಾಗಿತ್ತು.

ಸ್ವಲ್ಪ ಸಮಯದ ಹಿಂದೆ ಜಗದೀಪ್ ಅವರ ಕರೆ ದಾಖಲೆಗಳನ್ನು ಪರಿಶೀಲಿಸುವವರೆಗೂ ಪೊಲೀಸರಿಗೆ ಯಾವುದೇ ಸುಳಿವು ಸಿಗಲಿಲ್ಲ. ಇದಾದ ನಂತರ, ಹರ್ದೀಪ್ ಮತ್ತು ಅವನ ಸ್ನೇಹಿತ ಧರ್ಮಪಾಲ್ ರನ್ನು ಬಂಧಿಸಲು ಸಾಕಷ್ಟು ಪುರಾವೆಗಳು ದೊರೆತವು.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ಪಡೆದ ನಂತರ, ಪೊಲೀಸ್ ಅಧಿಕಾರಿಗಳು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದರು. ವಿಚಾರಣೆಯ ಸಮಯದಲ್ಲಿ, ಇಬ್ಬರೂ ಕೊಲೆಯ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

3 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

3 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

3 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

3 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

3 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

5 hours ago