ದೇಶ- ವಿದೇಶ

ಅತ್ಯಾಚಾರ ಆರೋಪ: ಜಾನಿ ಮಾಸ್ಟರ್‌ಗೆ ಸಿಗಬೇಕಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ.

ಅಕ್ಟೋಬರ್‌.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ ತೆರಳಲು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಮಧ್ಯಂತರ ಜಾಮೀನು ಪಡೆದಿದ್ದರು.

ಈ ಪ್ರಶಸ್ತಿಯನ್ನು ಜಾನಿ ಅವರು ತಿರುಚಿತ್ರಂಬಲಂ ಚಿತ್ರದ ಮೇಘಮ್‌ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಆದರೆ, ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.

ಅಲ್ಲದೇ, ಅಕ್ಟೋಬರ್‌.8ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ನೀಡಿದ್ದ ಆಮಂತ್ರಣವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನಿ ಮಾಸ್ಟರ್‌ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾನಿ ಅವರನ್ನು ಸೈಬರಾಬಾದ್‌ ಪೊಲೀಸರು ಸೆಪ್ಟೆಂಬರ್‌ 19ರಂದು ಗೋವಾದಲ್ಲಿ ಬಂಧಿಸಿ ಆ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ಆದರೆ ಅಕ್ಟೋಬರ್.‌3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago