ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ.
ಅಕ್ಟೋಬರ್.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ ತೆರಳಲು ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಮಧ್ಯಂತರ ಜಾಮೀನು ಪಡೆದಿದ್ದರು.
ಈ ಪ್ರಶಸ್ತಿಯನ್ನು ಜಾನಿ ಅವರು ತಿರುಚಿತ್ರಂಬಲಂ ಚಿತ್ರದ ಮೇಘಮ್ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಆದರೆ, ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.
ಅಲ್ಲದೇ, ಅಕ್ಟೋಬರ್.8ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ನೀಡಿದ್ದ ಆಮಂತ್ರಣವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾನಿ ಮಾಸ್ಟರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾನಿ ಅವರನ್ನು ಸೈಬರಾಬಾದ್ ಪೊಲೀಸರು ಸೆಪ್ಟೆಂಬರ್ 19ರಂದು ಗೋವಾದಲ್ಲಿ ಬಂಧಿಸಿ ಆ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.
ಆದರೆ ಅಕ್ಟೋಬರ್.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…