ದೇಶ- ವಿದೇಶ

ಅತ್ಯಾಚಾರ ಆರೋಪ: ಜಾನಿ ಮಾಸ್ಟರ್‌ಗೆ ಸಿಗಬೇಕಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ.

ಅಕ್ಟೋಬರ್‌.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ ತೆರಳಲು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಮಧ್ಯಂತರ ಜಾಮೀನು ಪಡೆದಿದ್ದರು.

ಈ ಪ್ರಶಸ್ತಿಯನ್ನು ಜಾನಿ ಅವರು ತಿರುಚಿತ್ರಂಬಲಂ ಚಿತ್ರದ ಮೇಘಮ್‌ ಕರುಕ್ಕಥಾ ಹಾಡಿಗೆ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿದ್ದರು. ಆದರೆ, ಇದೀಗ ಕೇಂದ್ರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ರಾಷ್ಟ್ರೀಯ ಪ್ರಶಸ್ತಿಯನ್ನು ಅಮಾನತುಗೊಳಿಸಿದೆ.

ಅಲ್ಲದೇ, ಅಕ್ಟೋಬರ್‌.8ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ನೀಡಿದ್ದ ಆಮಂತ್ರಣವನ್ನು ಹಿಂಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾನಿ ಮಾಸ್ಟರ್‌ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಾನಿ ಅವರನ್ನು ಸೈಬರಾಬಾದ್‌ ಪೊಲೀಸರು ಸೆಪ್ಟೆಂಬರ್‌ 19ರಂದು ಗೋವಾದಲ್ಲಿ ಬಂಧಿಸಿ ಆ ನಂತರ 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

ಆದರೆ ಅಕ್ಟೋಬರ್.‌3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕೆ ತೆರಳಲು ಇತ್ತೀಚೆಗೆ ಮಧ್ಯಂತರ ಜಾಮೀನು ಪಡೆದಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

11 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

11 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

11 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

11 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

11 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago