ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ಹಿಂಸಾಚಾರ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಮೃತ ವ್ಯಕ್ತಿಯನ್ನು ಚಂದ್ರನಾಥ್ ರಥ ಎಂದು ಗುರುತಿಸಲಾಗಿದೆ. ರಾಜ್ಯದ ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಮಧ್ಯಮಗ್ರಾಮದಲ್ಲಿ ಘಟನೆ ನಡೆದಿದೆ.
ಘಟನೆ ಕುರಿತು ಮಾತನಾಡಿದ ಸುವೇಂದು ಅಧಿಕಾರಿ ಅವರು, ಕೋಲ್ಡ್ ಬ್ಲಡ್ ಮರ್ಡರ್ ಎಂದು ಕರೆದಿದ್ದಾರೆ. ಅಲ್ಲದೇ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಕೊಲೆಗಾರರು ದಾಳಿ ನಡೆಸುವುದಕ್ಕೂ ಮುನ್ನ ವಿಚಕ್ಷಣ ನಡೆಸಿದ್ದರೆಂದೂ ಆರೋಪಿಸಿದ್ದಾರೆ.




