ಬೆಂಗಳೂರು: ತಮಿಳುನಾಡಿನಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೆಲ ರೈಲ್ವೆ ಹಳಿಗಳು ಮಳೆಯಿಂದಾಗಿ ಜಲಾವೃತಗೊಂಡಿರುವ ಕಾರಣ ನೈರುತ್ಯ ರೈಲ್ವೆ ಇಲಾಖೆಯು ಕೆಲ ರೈಲು ಸಂಚಾರವನ್ನು ಬಂದ್ ಮಾಡಿದೆ.
ತಮಿಳುನಾಡು ರಾಜ್ಯದ ಚೈನ್ನೈನ ಬೇಸಿನ್ ಬ್ರಿಡ್ಜ್ ಹಾಗೂ ವ್ಯಾಸರಪಾಡಿ ರೈಲು ನಿಲ್ದಾಣಗಳ ಮಧ್ಯೆಯಿರುವ ನಂ.114ರ ಮೇಲೆ ಮಳೆ ನೀರು ತುಂಬಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ 10 ರೈಲುಗಳ ಸಂಚಾರವನ್ನು ಇಂದು (ಅ.16) ರೈಲ್ವೆ ಸಂಚಾರವನ್ನು ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ವರದಿ ಮಾಡಿದೆ.
ಸಂಚಾರ ಬಂದಾದ ರೈಲುಗಳ ವಿವರ
1.ರೈಲು ಸಂಖ್ಯೆ 12657 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು
2.ರೈಲು ಸಂಖ್ಯೆ 12607 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು
3.ರೈಲು ಸಂಖ್ಯೆ 12608 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್
4.ರೈಲು ಸಂಖ್ಯೆ 12609 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು
5.ರೈಲು ಸಂಖ್ಯೆ 12610 ಮೈಸೂರು ಟೂ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್
6.ರೈಲು ಸಂಖ್ಯೆ 12027 ಡಾ.ಎಂಜಿಆರ್ ಚೆನ್ನೈಸೆಂಟ್ರಲ್ ಹಾಗೂ ಕೆಎಸ್ಆರ್ ಬೆಂಗಳೂರು
7.ರೈಲು ಸಂಖ್ಯೆ 12028 ಕೆಎಸ್ಆರ್ ಬೆಂಗಳೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್
8.ರೈಲು ಸಂಖ್ಯೆ 12007 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು
9.ರೈಲು ಸಂಖ್ಯೆ 12008 ಮೈಸೂರು -ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್
10.ರೈಲು ಸಂಖ್ಯೆ 06275 ಚಾಮರಾಜನಗರ-ಮೈಸೂರು
11.ರೈಲು ಸಂಖ್ಯೆ 20623 ಮೈಸೂರು-ಕೆಎಸ್ಆರ್ ಬೆಂಗಳೂರು ಮಾಲ್ಗುಡಿ ಎಕ್ಸ್ಪ್ರೆಸ್
12. ರೈಲು ಸಂಖ್ಯೆ 20624 ಕೆಎಸ್ಆರ್ ಬೆಂಗಳೂರು-ಮೈಸೂರು ಮಾಲ್ಗುಡಿ ಎಕ್ಸ್ಪ್ರೆಸ್
13.ರೈಲು ಸಂಖ್ಯೆ 16022 ಮೈಸೂರು-ಡಾ.ಎಂಜಿಆರ್ ಸೆಂಟ್ರಲ್ ಕಾವೇರಿ ಎಕ್ಸ್ಪ್ರೆಸ್
ಈ ಎಲ್ಲಾ ರೈಲುಗಳ ನಡುವೆ ರೈಲ್ವೆ ಸಂಚಾರವನ್ನು ಬಂದ್ ಮಾಡಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…