ದೇಶ- ವಿದೇಶ

ವಿಶ್ವಕಪ್‌ ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ: ರೋಹಿತ್‌ ಶರ್ಮಾ

ಬಾರ್ಬಡೋಸ್:‌ ಐಸಿಸಿ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್‌ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು.

ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು, ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಚಾಂಪಿಯನ್‌ ಆದ ಬಳಿಕ ಬ್ರಿಜ್‌ಟೌನ್‌ನ ಬೀಚ್‌ಗೆ ತೆರಳಿದ ರೋಹಿತ್‌ ಶರ್ಮಾ, ಟ್ರೋಫಿ ಜೊತೆ ಸ್ಮರಣೀಯ ಕ್ಷಣಗಳನ್ನು ಕ್ಲಿಕ್ಕಿಸಿದ್ದಾರೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕನಸಿನಂತೆ ಭಾಸವಾಗುತ್ತಿದೆ. ವಿಶ್ವಕಪ್‌ ಗೆದ್ದರೂ ಸಹ ಗೆದ್ದಿಲ್ಲವೇ ಅಂತಾ ಅನಿಸುತ್ತಿದೆ ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ರಾತ್ರಿಯಿಡೀ ನಾವು ಸಹ ಆಟಗಾರರೊಂದಿಗೆ ಸಂಭ್ರಮಿಸಿದೆವು. ನನಗೆ ನಿದ್ರಿಸಲು ಸಾಧ್ಯವಾಗಿರಲಿಲ್ಲ. ಆದರೆ ಪರವಾಗಿಲ್ಲ. ತವರಿಗೆ ಹೋಗಿ ನಿದ್ರಿಸಲು ಬೇಕಾದಷ್ಟು ಸಮಯವಿದೆ ಎಂದು ಹೇಳಿದ್ದಾರೆ. ಇದು ನಮಗೆ ಭಾವನಾತ್ಮಕ ಕ್ಷಣವಾಗಿದೆ. ನಾನು ಈ ಕ್ಷಣದಲ್ಲಿ ಬದುಕಲು ಬಯಸುತ್ತೇನೆ. ಪ್ರತಿಯೊಂದು ಕ್ಷಣದಲ್ಲೂ ಸಂಭ್ರಮಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ದೀರ್ಘ ಸಮಯದಿಂದ ಟ್ರೋಫಿ ಗೆಲ್ಲುವ ಬಗ್ಗೆ ಕನಸು ಕಂಡಿದ್ದೆವು. ಒಂದು ತಂಡವಾಗಿ ಅದಕ್ಕಾಗಿ ಕಠಿಣ ಪರಿಶ್ರಮ ವಹಿಸಿದ್ದೆವು. ತುಂಬಾ ಕಷ್ಟಪಟ್ಟು ಕೊನೆಗೆ ಟ್ರೋಫಿ ಗೆದ್ದಾಗ ತುಂಬಾ ಸಂತೋಷವಾಗುತ್ತಿದೆ. ನಾವೀಗ ನಿರಾಳಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಈ ಪಿಚ್‌ ನಮಗೆ ಟ್ರೋಫಿ ನೀಡಿತು. ನನ್ನ ಜೀವನದಲ್ಲಿ ಈ ಪಿಚ್‌ ಅನ್ನು ಸದಾ ನೆನಪಿಸಿಕೊಳ್ಳುತ್ತೇನೆ. ಹಾಗಾಗಿ ಅದರ ಒಂದು ತುಣುಕನ್ನು ನನ್ನೊಂದಿಗೆ ಹೊಂದಿರಲು ಬಯಸಿದ್ದೆ ಎಂದು ಪಿಚ್‌ಗೆ ಹೋಗಿ ಮಣ್ಣಿನ ಕಣವನ್ನು ತಿಂದಿರುವುದನ್ನು ರೋಹಿತ್‌ ವಿವರಿಸಿದರು.

ಆ ಕ್ಷಣಗಳು ತುಂಬಾ ವಿಶೇಷವಾಗಿತ್ತು. ನಮ್ಮ ಕನಸುಗಳು ನನಸಾದ ಸ್ಥಳ. ಅಲ್ಲಿಂದ ಏನನ್ನಾದರೂ ಪಡೆಯಲು ಬಯಸಿದ್ದೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

18 mins ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

45 mins ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

1 hour ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

2 hours ago

ಅಹಿಂದ ಹತ್ತಿಕ್ಕಲು ಸಿದ್ದರಾಮಯ್ಯ ಯತ್ನ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…

2 hours ago

ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯ ಆರ್ಭಟ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago