ದೇಶ- ವಿದೇಶ

ವಿಶ್ವಕಪ್‌ ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ: ರೋಹಿತ್‌ ಶರ್ಮಾ

ಬಾರ್ಬಡೋಸ್:‌ ಐಸಿಸಿ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್‌ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು.

ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು, ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಚಾಂಪಿಯನ್‌ ಆದ ಬಳಿಕ ಬ್ರಿಜ್‌ಟೌನ್‌ನ ಬೀಚ್‌ಗೆ ತೆರಳಿದ ರೋಹಿತ್‌ ಶರ್ಮಾ, ಟ್ರೋಫಿ ಜೊತೆ ಸ್ಮರಣೀಯ ಕ್ಷಣಗಳನ್ನು ಕ್ಲಿಕ್ಕಿಸಿದ್ದಾರೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕನಸಿನಂತೆ ಭಾಸವಾಗುತ್ತಿದೆ. ವಿಶ್ವಕಪ್‌ ಗೆದ್ದರೂ ಸಹ ಗೆದ್ದಿಲ್ಲವೇ ಅಂತಾ ಅನಿಸುತ್ತಿದೆ ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ರಾತ್ರಿಯಿಡೀ ನಾವು ಸಹ ಆಟಗಾರರೊಂದಿಗೆ ಸಂಭ್ರಮಿಸಿದೆವು. ನನಗೆ ನಿದ್ರಿಸಲು ಸಾಧ್ಯವಾಗಿರಲಿಲ್ಲ. ಆದರೆ ಪರವಾಗಿಲ್ಲ. ತವರಿಗೆ ಹೋಗಿ ನಿದ್ರಿಸಲು ಬೇಕಾದಷ್ಟು ಸಮಯವಿದೆ ಎಂದು ಹೇಳಿದ್ದಾರೆ. ಇದು ನಮಗೆ ಭಾವನಾತ್ಮಕ ಕ್ಷಣವಾಗಿದೆ. ನಾನು ಈ ಕ್ಷಣದಲ್ಲಿ ಬದುಕಲು ಬಯಸುತ್ತೇನೆ. ಪ್ರತಿಯೊಂದು ಕ್ಷಣದಲ್ಲೂ ಸಂಭ್ರಮಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ದೀರ್ಘ ಸಮಯದಿಂದ ಟ್ರೋಫಿ ಗೆಲ್ಲುವ ಬಗ್ಗೆ ಕನಸು ಕಂಡಿದ್ದೆವು. ಒಂದು ತಂಡವಾಗಿ ಅದಕ್ಕಾಗಿ ಕಠಿಣ ಪರಿಶ್ರಮ ವಹಿಸಿದ್ದೆವು. ತುಂಬಾ ಕಷ್ಟಪಟ್ಟು ಕೊನೆಗೆ ಟ್ರೋಫಿ ಗೆದ್ದಾಗ ತುಂಬಾ ಸಂತೋಷವಾಗುತ್ತಿದೆ. ನಾವೀಗ ನಿರಾಳಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಈ ಪಿಚ್‌ ನಮಗೆ ಟ್ರೋಫಿ ನೀಡಿತು. ನನ್ನ ಜೀವನದಲ್ಲಿ ಈ ಪಿಚ್‌ ಅನ್ನು ಸದಾ ನೆನಪಿಸಿಕೊಳ್ಳುತ್ತೇನೆ. ಹಾಗಾಗಿ ಅದರ ಒಂದು ತುಣುಕನ್ನು ನನ್ನೊಂದಿಗೆ ಹೊಂದಿರಲು ಬಯಸಿದ್ದೆ ಎಂದು ಪಿಚ್‌ಗೆ ಹೋಗಿ ಮಣ್ಣಿನ ಕಣವನ್ನು ತಿಂದಿರುವುದನ್ನು ರೋಹಿತ್‌ ವಿವರಿಸಿದರು.

ಆ ಕ್ಷಣಗಳು ತುಂಬಾ ವಿಶೇಷವಾಗಿತ್ತು. ನಮ್ಮ ಕನಸುಗಳು ನನಸಾದ ಸ್ಥಳ. ಅಲ್ಲಿಂದ ಏನನ್ನಾದರೂ ಪಡೆಯಲು ಬಯಸಿದ್ದೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

37 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

1 hour ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago

ಕುಸಿದ ಚಿನ್ನ, ಬೆಳ್ಳಿ ಬೆಲೆ

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ಶುಕ್ರವಾರ ಗ್ರಾಮ್‌ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ…

2 hours ago

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…

3 hours ago