ದೇಶ- ವಿದೇಶ

ವಿಶ್ವಕಪ್‌ ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ: ರೋಹಿತ್‌ ಶರ್ಮಾ

ಬಾರ್ಬಡೋಸ್:‌ ಐಸಿಸಿ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್‌ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು.

ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು, ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಚಾಂಪಿಯನ್‌ ಆದ ಬಳಿಕ ಬ್ರಿಜ್‌ಟೌನ್‌ನ ಬೀಚ್‌ಗೆ ತೆರಳಿದ ರೋಹಿತ್‌ ಶರ್ಮಾ, ಟ್ರೋಫಿ ಜೊತೆ ಸ್ಮರಣೀಯ ಕ್ಷಣಗಳನ್ನು ಕ್ಲಿಕ್ಕಿಸಿದ್ದಾರೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕನಸಿನಂತೆ ಭಾಸವಾಗುತ್ತಿದೆ. ವಿಶ್ವಕಪ್‌ ಗೆದ್ದರೂ ಸಹ ಗೆದ್ದಿಲ್ಲವೇ ಅಂತಾ ಅನಿಸುತ್ತಿದೆ ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ರಾತ್ರಿಯಿಡೀ ನಾವು ಸಹ ಆಟಗಾರರೊಂದಿಗೆ ಸಂಭ್ರಮಿಸಿದೆವು. ನನಗೆ ನಿದ್ರಿಸಲು ಸಾಧ್ಯವಾಗಿರಲಿಲ್ಲ. ಆದರೆ ಪರವಾಗಿಲ್ಲ. ತವರಿಗೆ ಹೋಗಿ ನಿದ್ರಿಸಲು ಬೇಕಾದಷ್ಟು ಸಮಯವಿದೆ ಎಂದು ಹೇಳಿದ್ದಾರೆ. ಇದು ನಮಗೆ ಭಾವನಾತ್ಮಕ ಕ್ಷಣವಾಗಿದೆ. ನಾನು ಈ ಕ್ಷಣದಲ್ಲಿ ಬದುಕಲು ಬಯಸುತ್ತೇನೆ. ಪ್ರತಿಯೊಂದು ಕ್ಷಣದಲ್ಲೂ ಸಂಭ್ರಮಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ದೀರ್ಘ ಸಮಯದಿಂದ ಟ್ರೋಫಿ ಗೆಲ್ಲುವ ಬಗ್ಗೆ ಕನಸು ಕಂಡಿದ್ದೆವು. ಒಂದು ತಂಡವಾಗಿ ಅದಕ್ಕಾಗಿ ಕಠಿಣ ಪರಿಶ್ರಮ ವಹಿಸಿದ್ದೆವು. ತುಂಬಾ ಕಷ್ಟಪಟ್ಟು ಕೊನೆಗೆ ಟ್ರೋಫಿ ಗೆದ್ದಾಗ ತುಂಬಾ ಸಂತೋಷವಾಗುತ್ತಿದೆ. ನಾವೀಗ ನಿರಾಳಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಈ ಪಿಚ್‌ ನಮಗೆ ಟ್ರೋಫಿ ನೀಡಿತು. ನನ್ನ ಜೀವನದಲ್ಲಿ ಈ ಪಿಚ್‌ ಅನ್ನು ಸದಾ ನೆನಪಿಸಿಕೊಳ್ಳುತ್ತೇನೆ. ಹಾಗಾಗಿ ಅದರ ಒಂದು ತುಣುಕನ್ನು ನನ್ನೊಂದಿಗೆ ಹೊಂದಿರಲು ಬಯಸಿದ್ದೆ ಎಂದು ಪಿಚ್‌ಗೆ ಹೋಗಿ ಮಣ್ಣಿನ ಕಣವನ್ನು ತಿಂದಿರುವುದನ್ನು ರೋಹಿತ್‌ ವಿವರಿಸಿದರು.

ಆ ಕ್ಷಣಗಳು ತುಂಬಾ ವಿಶೇಷವಾಗಿತ್ತು. ನಮ್ಮ ಕನಸುಗಳು ನನಸಾದ ಸ್ಥಳ. ಅಲ್ಲಿಂದ ಏನನ್ನಾದರೂ ಪಡೆಯಲು ಬಯಸಿದ್ದೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago