ದೇಶ- ವಿದೇಶ

ವಿಶ್ವಕಪ್‌ ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ: ರೋಹಿತ್‌ ಶರ್ಮಾ

ಬಾರ್ಬಡೋಸ್:‌ ಐಸಿಸಿ ಟಿ-20 ವಿಶ್ವಕಪ್‌ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಗೆಲುವು ದಾಖಲಿಸಿದ ಟೀಮ್‌ ಇಂಡಿಯಾ ಎರಡನೇ ಸಲ ಕಿರೀಟ ಮುಡಿಗೇರಿಸಿಕೊಂಡಿತು.

ಈ ಗೆಲುವು ಅತ್ಯಂತ ವಿಶೇಷ ಎಂದು ಬಣ್ಣಿಸಿರುವ ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು, ಗೆಲುವಿನ ಪ್ರತಿಯೊಂದು ಕ್ಷಣದಲ್ಲೂ ಬದುಕಲು ಬಯಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ಚಾಂಪಿಯನ್‌ ಆದ ಬಳಿಕ ಬ್ರಿಜ್‌ಟೌನ್‌ನ ಬೀಚ್‌ಗೆ ತೆರಳಿದ ರೋಹಿತ್‌ ಶರ್ಮಾ, ಟ್ರೋಫಿ ಜೊತೆ ಸ್ಮರಣೀಯ ಕ್ಷಣಗಳನ್ನು ಕ್ಲಿಕ್ಕಿಸಿದ್ದಾರೆ. ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕನಸಿನಂತೆ ಭಾಸವಾಗುತ್ತಿದೆ. ವಿಶ್ವಕಪ್‌ ಗೆದ್ದರೂ ಸಹ ಗೆದ್ದಿಲ್ಲವೇ ಅಂತಾ ಅನಿಸುತ್ತಿದೆ ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ರಾತ್ರಿಯಿಡೀ ನಾವು ಸಹ ಆಟಗಾರರೊಂದಿಗೆ ಸಂಭ್ರಮಿಸಿದೆವು. ನನಗೆ ನಿದ್ರಿಸಲು ಸಾಧ್ಯವಾಗಿರಲಿಲ್ಲ. ಆದರೆ ಪರವಾಗಿಲ್ಲ. ತವರಿಗೆ ಹೋಗಿ ನಿದ್ರಿಸಲು ಬೇಕಾದಷ್ಟು ಸಮಯವಿದೆ ಎಂದು ಹೇಳಿದ್ದಾರೆ. ಇದು ನಮಗೆ ಭಾವನಾತ್ಮಕ ಕ್ಷಣವಾಗಿದೆ. ನಾನು ಈ ಕ್ಷಣದಲ್ಲಿ ಬದುಕಲು ಬಯಸುತ್ತೇನೆ. ಪ್ರತಿಯೊಂದು ಕ್ಷಣದಲ್ಲೂ ಸಂಭ್ರಮಿಸಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.

ದೀರ್ಘ ಸಮಯದಿಂದ ಟ್ರೋಫಿ ಗೆಲ್ಲುವ ಬಗ್ಗೆ ಕನಸು ಕಂಡಿದ್ದೆವು. ಒಂದು ತಂಡವಾಗಿ ಅದಕ್ಕಾಗಿ ಕಠಿಣ ಪರಿಶ್ರಮ ವಹಿಸಿದ್ದೆವು. ತುಂಬಾ ಕಷ್ಟಪಟ್ಟು ಕೊನೆಗೆ ಟ್ರೋಫಿ ಗೆದ್ದಾಗ ತುಂಬಾ ಸಂತೋಷವಾಗುತ್ತಿದೆ. ನಾವೀಗ ನಿರಾಳಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಈ ಪಿಚ್‌ ನಮಗೆ ಟ್ರೋಫಿ ನೀಡಿತು. ನನ್ನ ಜೀವನದಲ್ಲಿ ಈ ಪಿಚ್‌ ಅನ್ನು ಸದಾ ನೆನಪಿಸಿಕೊಳ್ಳುತ್ತೇನೆ. ಹಾಗಾಗಿ ಅದರ ಒಂದು ತುಣುಕನ್ನು ನನ್ನೊಂದಿಗೆ ಹೊಂದಿರಲು ಬಯಸಿದ್ದೆ ಎಂದು ಪಿಚ್‌ಗೆ ಹೋಗಿ ಮಣ್ಣಿನ ಕಣವನ್ನು ತಿಂದಿರುವುದನ್ನು ರೋಹಿತ್‌ ವಿವರಿಸಿದರು.

ಆ ಕ್ಷಣಗಳು ತುಂಬಾ ವಿಶೇಷವಾಗಿತ್ತು. ನಮ್ಮ ಕನಸುಗಳು ನನಸಾದ ಸ್ಥಳ. ಅಲ್ಲಿಂದ ಏನನ್ನಾದರೂ ಪಡೆಯಲು ಬಯಸಿದ್ದೆ ಎಂದು ಹೇಳಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago