ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್ಮಹಲ್ ಪ್ರವೇಶ ನಿಷೇಧಿಸಲಾಗಿದೆ.
ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್ ದೇಶದ ಅಧ್ಯಕ್ಷ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು ಪತ್ನಿ ವೆರೋನಿಕ್ ಹರ್ಮಿನಿ ಅವರೊಂದಿಗೆ ತಾಜ್ಮಹಲ್ಗೆ ಭೇಟಿ ನೀಡುತ್ತಿದ್ದಾರೆ.
ಹಾಗಾಗಿ ಆ ದಿನ ಬೆಳಿಗ್ಗೆ 9ರಿಂದ 11.30ರವರೆಗೆ ಸಾಮಾನ್ಯ ಪ್ರವಾಸಿಗರಿಗೆ ತಾಜ್ಗೆ ಪ್ರವೇಶ ನಿರ್ಬಂಧಿಸಲಾಗಿದೆ. ಮಂಗಳವಾರ ಹಾಗೂ ಬುಧವಾರ ಆಗ್ರಾ ಅಂತರಾಷ್ಟ್ರೀಯ ರಾಜತಾಂತ್ರಿಕತೆ ಮತ್ತು ರಾಜಮನೆತನದ ಆತಿಥ್ಯಕ್ಕೆ ಕೇಂದ್ರವಾಗಲಿದೆ.
ನಾಳೆ ಹಾಗೂ ನಾಡಿದ್ದು, ಆಗ್ರಾಕ್ಕೆ ವಿವಿಐಪಿಗಳು ಆಗಮಿಸುತ್ತಿದ್ದಾರೆ. ಅತಿಥಿಗಳಿಗೆ ಭದ್ರತೆ, ಸಾರಿಗೆ ಮತ್ತು ಸ್ವಾಗತ ವ್ಯವಸ್ಥೆಗಳ ಕುರಿತು ಚರ್ಚಿಸಲು ಸಂಬಂಧಿತ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ.
ವಿವಿಐಪಿ ಭೇಟಿಯ ಸಮಯದಲ್ಲಿ ಭದ್ರತಾ ಕಾರಣಗಳಿಂದಾಗಿ ತಾಜ್ಮಹಲ್ಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…