ದೇಶ- ವಿದೇಶ

ತಲಾಖ್-ಎ-ಹಸನ್‌ ಮೇಲ್ನೋಟಕ್ಕೆ ಅನುಚಿತವಲ್ಲ, ಪ್ರಕರಣವನ್ನು ಬೇರೆ ಕಾರ್ಯಸೂಚಿಗೆ ಬಳಸಿಕೊಳ್ಳಬಾರದು: ಸುಪ್ರೀಂ ಕೋರ್ಟ್‌

ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್‌ ಅವರಿದ್ದ ಪೀಠ ತಿಳಿಸಿತು.

“ಮೇಲ್ನೋಟಕ್ಕೆ ಇದು (ತಲಾಖ್-ಎ-ಹಸನ್) ಅಷ್ಟು ಅನುಚಿತವಲ್ಲ. ಮಹಿಳೆಯರಿಗೂ ಒಂದು ಆಯ್ಕೆಯಿದೆ. ಖುಲಾ ಇದೆ. ಪ್ರಾಥಮಿಕವಾಗಿ ನಾನು ಅರ್ಜಿದಾರರನ್ನು ಒಪ್ಪುವುದಿಲ್ಲ. ನೋಡೋಣ. ಬೇರೆ ಯಾವುದೇ ಕಾರಣಕ್ಕಾಗಿ ಇದೊಂದು ಅಜೆಂಡಾ ಆಗಿ ಬಳಕೆಯಾಗಲು ನಾನು ಬಯಸುವುದಿಲ್ಲ” ಎಂದು ನ್ಯಾ. ಕೌಲ್‌ ಹೇಳಿದರು.

ವರದಕ್ಷಿಣೆ ನೀಡಲು ನಿರಾಕರಿಸಿದ್ದರಿಂದ ಗಂಡನ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಪತಿ ಏಪ್ರಿಲ್ 19ರಂದು ವಕೀಲರ ಮೂಲಕ ತಲಾಖ್-ಎ-ಹಸನ್ ನೋಟಿಸ್ ಕಳುಹಿಸಿ ವಿಚ್ಛೇದನ ನೀಡಿದ್ದಾರೆ. ತಲಾಖ್‌ ಪದ್ದತಿ ಮಾನವ ಹಕ್ಕುಗಳು ಮತ್ತು ಸಾಮರಸ್ಯಕ್ಕೆ ವಿರುದ್ಧವಾಗಿದ್ದು ಇಸ್ಲಾಂ ನಂಬಿಕೆಯ ಭಾಗವಾಗಿರದೇ ಇರುವುದರಿಂದ ಅದನ್ನು ನಿಷೇಧಿಸಲು ಇದು ಸಕಾಲ. ಪುರುಷರಿಗೆ ಮಾತ್ರ ತಲಾಖ್‌ ನೀಡಲು ಅವಕಾಶ ಇರುವುದರಿಂದ ಈ ಪದ್ದತಿಯನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಅವರು ದೂರಿದ್ದರು.

ತಲಾಖ್-ಎ-ಹಸನ್ ಎಂದರೆ ಮುಸ್ಲಿಂ ಪುರುಷ ತನ್ನ ಹೆಂಡತಿಗೆ ತಿಂಗಳಿಗೊಮ್ಮೆಯಂತೆ ಮೂರು ತಿಂಗಳು “ತಲಾಖ್” ಎಂದು ಹೇಳಿ ವಿಚ್ಛೇದನ ಪಡೆಯುವ ವಿಧಾನ. ತಲಾಖ್‌-ಎ-ಹಸನ್ ಪದ್ದತಿ ಅತಾರ್ಕಿಕ, ಅವಾಸ್ತವಿಕ ಹಾಗೂ ಸಂವಿಧಾನದ 14, 15, 21 ಮತ್ತು 25ನೇ ವಿಧಿಗಳ ಉಲ್ಲಂಘನೆಯಾಗಿದ್ದು ಇದನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಲಿಂಗ ಮತ್ತು ಧರ್ಮ ತಟಸ್ಥ ವಿಧಾನದ ಮೂಲಕ ವಿಚ್ಛೇದನ ಪ್ರಕ್ರಿಯೆ ನಡೆಯಬೇಕು. ಪತ್ರಕರ್ತೆ ಬೆನಜೀರ್ ಹೀನಾ ಅವರು ವಕೀಲ ಅಶ್ವನಿ ಕುಮಾರ್ ದುಬೆ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಕೋರಿದ್ದರು.

ಆದರೆ ವಿಚಾರಣೆ ವೇಳೆ ನ್ಯಾಯಾಲಯ ‘ಖುಲಾ’ ಮೂಲಕ ಮಹಿಳೆಯರಿಗೂ ಇದೇ ರೀತಿಯ ಆಯ್ಕೆ ಇದೆ. ಸರಿಪಡಿಸಲಾಗದ ರೀತಿಯಲ್ಲಿ ದಾಂಪತ್ಯದಲ್ಲಿ ಬಿರುಕು ಮೂಡಿದಾಗ ನ್ಯಾಯಾಲಯಗಳು ಪರಸ್ಪರ ಒಪ್ಪಿಗೆಯನ್ನು ಆಧರಿಸಿ ವಿಚ್ಛೇದನ ನೀಡುತ್ತವೆ ಎಂದು ಪೀಠ ಹೇಳಿತು.

“ಇದು ತ್ರಿವಳಿ ತಲಾಖ್ ಅಲ್ಲ. ನಿಮಗೂ (ಮಹಿಳೆಯರಿಗೆ) ಖುಲಾ ಆಯ್ಕೆ ಇದೆ. ಇಬ್ಬರು ವ್ಯಕ್ತಿಗಳು ಪರಸ್ಪರ ಒಟ್ಟಿಗೆ ಇರಲು ಸಾಧ್ಯವಾಗದಿದ್ದರೆ, ಮತ್ತೆ ಬದಲಿಸಲಾಗದ ರೀತಿಯ ವಿಚ್ಚೇದನವನ್ನು ಕೂಡ ನೀಡುತ್ತೇವೆ. ನೀವು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡಲು ಸಿದ್ಧರಿದ್ದೀರಾ?” ಎಂದು ಪ್ರಶ್ನಿಸಿತು.

ಮಹರ್‌ಗಿಂತ (ಮದುವೆಯ ಸಮಯದಲ್ಲಿ ಪತಿ ತನ್ನ ಹೆಂಡತಿಗೆ ಗೌರವ ಸೂಚಕವಾಗಿ ನೀಡುವ ಕಡ್ಡಾಯ ಉಡುಗೊರೆ) ಹೆಚ್ಚಿನ ಮೊತ್ತ ಪಾವತಿಸಿದರೆ ಅರ್ಜಿದಾರರು ವಿಚ್ಛೇದನಕ್ಕೆ ಒಪ್ಪುತ್ತಾರೆಯೇ ಎಂದು ಕೂಡ ಪೀಠ ಪ್ರಶ್ನಿಸಿದೆ.

ಈ ಬಗ್ಗೆ ಸೂಚನೆಗಳನ್ನು ಪಡೆಯುವಂತೆ ಅರ್ಜಿದಾರರ ಪರ ವಕೀಲರನ್ನು ಕೋರಿದ ಅವರು, ಪ್ರಕರಣವನ್ನು ಹೆಚ್ಚಿನ ಪರಿಗಣನೆಗೆ ಆಗಸ್ಟ್ 29ಕ್ಕೆ ಮುಂದೂಡಿದರು.

ತನ್ನ ಗಂಡ ತಲಾಖ್-ಎ-ಹಸನ್ ನೋಟಿಸ್ ನೀಡಿರುವುದನ್ನು ಪ್ರಶ್ನಿಸಿದ್ದ ಇದೇ ರೀತಿಯ ಅರ್ಜಿಯೊಂದು ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು ನ್ಯಾಯಾಲಯ ಈ ಸಂಬಂಧ ಪತಿ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್‌ ನೀಡಿತ್ತು.

andolana

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago