ದೇಶ- ವಿದೇಶ

ತಲಾಖ್-ಎ-ಹಸನ್‌ ಮೇಲ್ನೋಟಕ್ಕೆ ಅನುಚಿತವಲ್ಲ, ಪ್ರಕರಣವನ್ನು ಬೇರೆ ಕಾರ್ಯಸೂಚಿಗೆ ಬಳಸಿಕೊಳ್ಳಬಾರದು: ಸುಪ್ರೀಂ ಕೋರ್ಟ್‌

ನವದೆಹಲಿ: ಮುಸ್ಲಿಮರ ವಿಚ್ಛೇದನ ಪದ್ದತಿ ತಲಾಖ್-ಎ-ಹಸನ್ ಮೇಲ್ನೋಟಕ್ಕೆ ಅನುಚಿತವಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಯಾವುದೇ ಕಾರ್ಯಸೂಚಿಯನ್ನು ಮುಂದುವರೆಸಲು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಬಳಸಬಾರದು ಎಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎಂ ಎಂ ಸುಂದರೇಶ್‌ ಅವರಿದ್ದ ಪೀಠ ತಿಳಿಸಿತು.

“ಮೇಲ್ನೋಟಕ್ಕೆ ಇದು (ತಲಾಖ್-ಎ-ಹಸನ್) ಅಷ್ಟು ಅನುಚಿತವಲ್ಲ. ಮಹಿಳೆಯರಿಗೂ ಒಂದು ಆಯ್ಕೆಯಿದೆ. ಖುಲಾ ಇದೆ. ಪ್ರಾಥಮಿಕವಾಗಿ ನಾನು ಅರ್ಜಿದಾರರನ್ನು ಒಪ್ಪುವುದಿಲ್ಲ. ನೋಡೋಣ. ಬೇರೆ ಯಾವುದೇ ಕಾರಣಕ್ಕಾಗಿ ಇದೊಂದು ಅಜೆಂಡಾ ಆಗಿ ಬಳಕೆಯಾಗಲು ನಾನು ಬಯಸುವುದಿಲ್ಲ” ಎಂದು ನ್ಯಾ. ಕೌಲ್‌ ಹೇಳಿದರು.

ವರದಕ್ಷಿಣೆ ನೀಡಲು ನಿರಾಕರಿಸಿದ್ದರಿಂದ ಗಂಡನ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತು. ಪತಿ ಏಪ್ರಿಲ್ 19ರಂದು ವಕೀಲರ ಮೂಲಕ ತಲಾಖ್-ಎ-ಹಸನ್ ನೋಟಿಸ್ ಕಳುಹಿಸಿ ವಿಚ್ಛೇದನ ನೀಡಿದ್ದಾರೆ. ತಲಾಖ್‌ ಪದ್ದತಿ ಮಾನವ ಹಕ್ಕುಗಳು ಮತ್ತು ಸಾಮರಸ್ಯಕ್ಕೆ ವಿರುದ್ಧವಾಗಿದ್ದು ಇಸ್ಲಾಂ ನಂಬಿಕೆಯ ಭಾಗವಾಗಿರದೇ ಇರುವುದರಿಂದ ಅದನ್ನು ನಿಷೇಧಿಸಲು ಇದು ಸಕಾಲ. ಪುರುಷರಿಗೆ ಮಾತ್ರ ತಲಾಖ್‌ ನೀಡಲು ಅವಕಾಶ ಇರುವುದರಿಂದ ಈ ಪದ್ದತಿಯನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ ಮತ್ತು ತಾರತಮ್ಯದಿಂದ ಕೂಡಿದೆ ಎಂದು ಅವರು ದೂರಿದ್ದರು.

ತಲಾಖ್-ಎ-ಹಸನ್ ಎಂದರೆ ಮುಸ್ಲಿಂ ಪುರುಷ ತನ್ನ ಹೆಂಡತಿಗೆ ತಿಂಗಳಿಗೊಮ್ಮೆಯಂತೆ ಮೂರು ತಿಂಗಳು “ತಲಾಖ್” ಎಂದು ಹೇಳಿ ವಿಚ್ಛೇದನ ಪಡೆಯುವ ವಿಧಾನ. ತಲಾಖ್‌-ಎ-ಹಸನ್ ಪದ್ದತಿ ಅತಾರ್ಕಿಕ, ಅವಾಸ್ತವಿಕ ಹಾಗೂ ಸಂವಿಧಾನದ 14, 15, 21 ಮತ್ತು 25ನೇ ವಿಧಿಗಳ ಉಲ್ಲಂಘನೆಯಾಗಿದ್ದು ಇದನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು. ಲಿಂಗ ಮತ್ತು ಧರ್ಮ ತಟಸ್ಥ ವಿಧಾನದ ಮೂಲಕ ವಿಚ್ಛೇದನ ಪ್ರಕ್ರಿಯೆ ನಡೆಯಬೇಕು. ಪತ್ರಕರ್ತೆ ಬೆನಜೀರ್ ಹೀನಾ ಅವರು ವಕೀಲ ಅಶ್ವನಿ ಕುಮಾರ್ ದುಬೆ ಮೂಲಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಕೋರಿದ್ದರು.

ಆದರೆ ವಿಚಾರಣೆ ವೇಳೆ ನ್ಯಾಯಾಲಯ ‘ಖುಲಾ’ ಮೂಲಕ ಮಹಿಳೆಯರಿಗೂ ಇದೇ ರೀತಿಯ ಆಯ್ಕೆ ಇದೆ. ಸರಿಪಡಿಸಲಾಗದ ರೀತಿಯಲ್ಲಿ ದಾಂಪತ್ಯದಲ್ಲಿ ಬಿರುಕು ಮೂಡಿದಾಗ ನ್ಯಾಯಾಲಯಗಳು ಪರಸ್ಪರ ಒಪ್ಪಿಗೆಯನ್ನು ಆಧರಿಸಿ ವಿಚ್ಛೇದನ ನೀಡುತ್ತವೆ ಎಂದು ಪೀಠ ಹೇಳಿತು.

“ಇದು ತ್ರಿವಳಿ ತಲಾಖ್ ಅಲ್ಲ. ನಿಮಗೂ (ಮಹಿಳೆಯರಿಗೆ) ಖುಲಾ ಆಯ್ಕೆ ಇದೆ. ಇಬ್ಬರು ವ್ಯಕ್ತಿಗಳು ಪರಸ್ಪರ ಒಟ್ಟಿಗೆ ಇರಲು ಸಾಧ್ಯವಾಗದಿದ್ದರೆ, ಮತ್ತೆ ಬದಲಿಸಲಾಗದ ರೀತಿಯ ವಿಚ್ಚೇದನವನ್ನು ಕೂಡ ನೀಡುತ್ತೇವೆ. ನೀವು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡಲು ಸಿದ್ಧರಿದ್ದೀರಾ?” ಎಂದು ಪ್ರಶ್ನಿಸಿತು.

ಮಹರ್‌ಗಿಂತ (ಮದುವೆಯ ಸಮಯದಲ್ಲಿ ಪತಿ ತನ್ನ ಹೆಂಡತಿಗೆ ಗೌರವ ಸೂಚಕವಾಗಿ ನೀಡುವ ಕಡ್ಡಾಯ ಉಡುಗೊರೆ) ಹೆಚ್ಚಿನ ಮೊತ್ತ ಪಾವತಿಸಿದರೆ ಅರ್ಜಿದಾರರು ವಿಚ್ಛೇದನಕ್ಕೆ ಒಪ್ಪುತ್ತಾರೆಯೇ ಎಂದು ಕೂಡ ಪೀಠ ಪ್ರಶ್ನಿಸಿದೆ.

ಈ ಬಗ್ಗೆ ಸೂಚನೆಗಳನ್ನು ಪಡೆಯುವಂತೆ ಅರ್ಜಿದಾರರ ಪರ ವಕೀಲರನ್ನು ಕೋರಿದ ಅವರು, ಪ್ರಕರಣವನ್ನು ಹೆಚ್ಚಿನ ಪರಿಗಣನೆಗೆ ಆಗಸ್ಟ್ 29ಕ್ಕೆ ಮುಂದೂಡಿದರು.

ತನ್ನ ಗಂಡ ತಲಾಖ್-ಎ-ಹಸನ್ ನೋಟಿಸ್ ನೀಡಿರುವುದನ್ನು ಪ್ರಶ್ನಿಸಿದ್ದ ಇದೇ ರೀತಿಯ ಅರ್ಜಿಯೊಂದು ದೆಹಲಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದ್ದು ನ್ಯಾಯಾಲಯ ಈ ಸಂಬಂಧ ಪತಿ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್‌ ನೀಡಿತ್ತು.

andolana

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

6 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

7 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago