ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ ಪಕ್ಷದ ಮುಖ್ಯಸ್ಥರಾದ ವಿಜಯ್ ಅವರಿಂದು ನಾಮಪತ್ರ ಸಲ್ಲಿಸಿದ್ದಾರೆ.
ಹಾಲಿ ಸರ್ಕಾರದ ಅವಧಿ ಮೇ 10 ರಂದು ಮುಕ್ತಾಯಗೊಳ್ಳಲಿದೆ. ಹಾಗಾಗಿ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ 234 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಸಿಎಂ ಎಂ.ಕೆ ಸ್ಟಾಲಿನ್ ಅವರು 2011, 2016 ಮತ್ತು 2021 ರಲ್ಲಿ ಗೆದ್ದ ಕೊಲತ್ತೂರ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ಚೊಚ್ಚಲ ಚುನಾವಣೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ ಪಕ್ಷದ ವಿಜಯ್ ಚೆನ್ನೈನ ನಗರ ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧೆಗಿಳಿದಿದ್ದಾರೆ.
ಸ್ಟಾಲಿನ್ ಅದ್ಧೂರಿ ರೋಡ್ ಶೋ
ನಾಮಪತ್ರ ಸಲ್ಲಿಸಿದ ಬಳಿಕ ಅದ್ಧೂರಿ ರೋಡ್ ಶೋ ನಡೆಸಿದ ಎಂ.ಕೆ ಸ್ಟಾಲಿನ್ ಅವರು, ಮತ್ತೊಮ್ಮೆ ತಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಜನರ ಬೆಂಬಲ ಕೋರಿದರು. ಇದೇ ವೇಳೆ ತಮ್ಮ ಅವಧಿಯಲ್ಲಿ ಕೊಲತ್ತೂರ್ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಕುರಿತ ಡಿಎಂಕೆ ಸಾಧನೆಗಳ ಪುಸ್ತಕವನ್ನು ಅನಾವರಣಗೊಳಿಸಿದರು.
ವಿಜಯ್(ಟಿವಿಕೆ)ಗೆ ಚೊಚ್ಚಲ ಚುನಾವಣೆ
ಇನ್ನೂ ಚೊಚ್ಚಲ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ಟಿವಿಕೆ ಪಕ್ಷದ ಮುಖ್ಯಸ್ಥ ನಟ ವಿಜಯ್ ಚೆನ್ನೈನ ಪೆರಂಬೂರು ಮತ್ತು ತಿರುಚಿ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇಂದು ವ್ಯಾಸರ್ಪಾಡಿಯ ಡಾ. ಅಂಬೇಡ್ಕರ್ ಸರ್ಕಾರಿ ಕಲಾ ಕಾಲೇಜಿನಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್ ಆನಂದ್ ಮತ್ತು ಜಂಟಿ ಪ್ರಧಾನ ಕಾರ್ಯದರ್ಶಿ ಸಿಟಿಆರ್ ನಿರ್ಮಲ್ ಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…