ದೇಶ- ವಿದೇಶ

ತಮಿಳುನಾಡು ಚುನಾವಣೆ : ಅಫಿಡವಿಟ್‌ನಲ್ಲಿ 2 ಕ್ರಿಮಿನಲ್‌ ಪ್ರಕರಣ ಘೋಷಿಸಿಕೊಂಡ ವಿಜಯ್‌

ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇರುವುದಾಗಿ ಘೋಷಿಸಿದ್ದಾರೆ.

ಮೊದಲು ಪೆರಂಬೂರು ಕ್ಷೇತ್ರದಿಂದ ಮಾರ್ಚ್ 30ರಂದು ಸಲ್ಲಿಸಿದ ನಾಮಪತ್ರದ ಅಫಿಡವಿಟ್‌ನಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ ಎಂದು ತಿಳಿಸಿದ್ದರು. ಆದರೆ ಏಪ್ರಿಲ್ 3ರಂದು ನೋಟರಿ ಮಾಡಿ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ ಚೆನ್ನೈ ಮತ್ತು ಮದುರೈ ಜಿಲ್ಲೆಗಳಲ್ಲಿ ದಾಖಲಾಗಿರುವ ಎರಡು ಎಫ್‌ಐಆರ್‌ಗಳನ್ನು ಉಲ್ಲೇಖಿಸಿದ್ದಾರೆ.

ಚೆನ್ನೈ ಪೆರವಲ್ಲೂರು ಪೊಲೀಸ್ ಠಾಣೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಪ್ರಕರಣ. ಮದುರೈ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಪಕ್ಷದ ಕಾರ್ಯಕ್ರಮದ ವೇಳೆ ಬೌನ್ಸರ್‌ಗಳು ಒಬ್ಬ ವ್ಯಕ್ತಿಯನ್ನು ಥಳಿಸಿ ಗಾಯಗೊಳಿಸಿದ್ದಾರೆ ಎಂಬ ಎರಡು ಆರೋಪಗಳನ್ನು ಉಲ್ಲೇಖಿಸಿ ವಿಜಯ್‌ ಹೊಸ ಅಫಿಡವಿಟ್‌ ಸಲ್ಲಿಸಿದ್ದಾರೆ.

ವಿಜಯ್ ಪೆರಂಬೂರು ಮತ್ತು ತಿರುಚಿರಾಪಳ್ಳಿ ಪೂರ್ವ (ತ್ರಿಚಿ ಈಸ್ಟ್) ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ತಿರುಚಿರಾಪಳ್ಳಿ ಈಸ್ಟ್ ಕ್ಷೇತ್ರಕ್ಕೆ ಏಪ್ರಿಲ್ 2ರಂದು ನಾಮಪತ್ರ ಸಲ್ಲಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago