ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ ಭಾರೀ ಸ್ಫೋಟ ಸಂಭವಿಸಿ ನಾಲ್ಕು ಅಂತಸ್ತಿನ ಕಟ್ಟಡವೇ ಸಂಪೂರ್ಣವಾಗಿ ನೆಲಸಮವಾಗಿದೆ. ಈ ದುರಂತದಲ್ಲಿ ಕನಿಷ್ಠ 20 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಫ್ಯಾಕ್ಟರಿಯಲ್ಲಿ ಸುಮಾರು 150 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ತೀವ್ರತೆಯಿಂದಾಗಿ ಸುಮಾರು 5 ಕಿಲೋಮೀಟರ್ ದೂರದವರೆಗೂ ಸದ್ದು ಕೇಳಿಸಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದರು. ಪಟಾಕಿ ತಯಾರಿಕೆಗೆ ಅಗತ್ಯವಾದ ರಸಾಯನಿಕಗಳ ಮಿಶ್ರಣದ ವೇಳೆ ಘರ್ಷಣೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಫೋಟದ ನಂತರ ತಕ್ಷಣವೇ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬಂದು ಬೆಂಕಿಯನ್ನು ಹತೋಟಿಗೆ ತಂದವು. ಗಾಯಾಳುಗಳನ್ನು ವಿರುಧುನಗರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಮದುರೈ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಟ್ಟಡದ ಅಡಿಯಲ್ಲಿ ಇನ್ನೂ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಫ್ಯಾಕ್ಟರಿ ಮಾಲೀಕರು ಮತ್ತು ವ್ಯವಸ್ಥಾಪಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆ ನಂತರ ಮಾಲೀಕರು ಪರಾರಿಯಾಗಿದ್ದು, ತನಿಖೆ ಮುಂದುವರೆಯುತ್ತಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…