ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಬೆಳಗ್ಗೆ 7:00 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6:00 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. 5.73 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ 4,023 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐದು ವರ್ಷಗಳ ಕಾಲ ವಿರೋಧ ಪಕ್ಷದಲ್ಲಿದ್ದ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದರೆ, ಡಿಎಂಕೆ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ಈ ಮಧ್ಯೆ ನಟ ವಿಜಯ ಟಿವಿಕೆ ಪಕ್ಷದೊಟ್ಟಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಇನ್ನು ಪಶ್ಚಿಮ ಬಂಗಾಳದ ಮೊದಲ ಹಂತದ 152 ವಿಧಾನಸಭಾ ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದು, ಅನೇಕ ಘಟಾನುಘಟಿಗಳ ಅಖಾಡದಲ್ಲಿದ್ದಾರೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಮ್ಮ ಭದ್ರಕೋಟೆಯಾದ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧೆಯಲ್ಲಿದ್ದರೆ, ಭವಾನಿ ಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಖಾಡದಲ್ಲಿದ್ದಾರೆ. ಮೇ 4 ರಂದು ಫಲಿತಾಂಶ ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…