ದೇಶ- ವಿದೇಶ

ತಮಿಳುನಾಡು ಬಿಎಸ್‌ಪಿ ರಾಜ್ಯಧ್ಯಕ್ಷ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಮಾಯಾವತಿ ಆಗ್ರಹ

ಚೆನ್ನೈ: ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಆರ್ಮ್ ಸ್ಟ್ರಾಂಗ್‌ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷೆ ಮಯಾವತಿ ಭಾನುವಾರ(ಜು.7) ಒತ್ತಾಯಿಸಿದ್ದಾರೆ.

ಆರ್ಮ್‌ಸ್ಟ್ರಾಂಗ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ನಂತರು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೂ ಬಂಧಿಸ್ಪಟ್ಟವರು ನಿಜವಾದ ಆರೋಪಿಗಳಲ್ಲ ಎಂದು ಪ್ರತಿಪಾದಿಸಿದ ಮಾಯಾವತಿ, ಸಂತ್ರಸ್ತೆಗೆ ನ್ಯಾಯ ಖಚಿತಪಡಿಸಿಕೊಳ್ಳಲು ತನಿಖೆಯನ್ನು ಕೇಂದ್ರ ಏಜೆನ್ಸಿಗೆ ವರ್ಗಾಯಿಸಿ ಎಂದು ತಮಿಳುನಾಡು ಮುಖ್ಯಂತ್ರಿ ಸ್ಟಾಲಿನ್‌ ಅವರನ್ನು ಒತ್ತಾಯಿಸಿದರು.

ಆರ್ಮ್‌ಸ್ಟ್ರಾಂಗ್ ನ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ ಮಯಾವತಿ ಅವರು, ದಾಳಿಕೋರರ ಗುಂಪು ಕೊಂದ ರೀತಿ ನೋಡಿದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಶಂಕಿತರು ನಿಜವಾದ ಆರೋಪಿಗಳಲ್ಲ. ತನಿಖೆಯನ್ನು ತಕ್ಷಣವೇ ಸಿಬಿಐಗೆ ವಹಿಸಿ. ಆರ್ಮ್‌ಸ್ಟ್ರಾಂಗ್ ಹತ್ಯೆಯ ನಂತರ ರಾಜ್ಯದ ದಲಿತರು ಆತಂಕಕ್ಕೊಳಗಾಗಿದ್ದಾರೆ ಮತ್ತು ಸುರಕ್ಷತೆಯಿಲ್ಲವಾಗಿದೆ ಎಂದು ಆರೋಪಿಸಿದರು.

ಬಿಎಸ್‌ಪಿಯು ಈ ಹತ್ಯೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಆದರೆ ಪಕ್ಷದ ಕಾರ್ಯಕರ್ತರು ಯಾವುದೇ ಕಾನೂನು ಮತ್ತು ಸುವ್ಯವಸ್ಥೆಯನ್ನು ತಮ್ಮ ಕೈಗೆ ತೆಗೆದುಕೊಳ್ಳಬಾರದು ಎಂದು ಬಿಎಸ್‌ಪಿ ನಾಯಕಿ ಹೇಳಿದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

6 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

9 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

9 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

9 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

9 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

11 hours ago