ಚೆನ್ನೈ: ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದು, ಮತ್ತೆ ಸುದ್ದಿಯಲ್ಲಿದ್ದಾರೆ.
ಡಿಎಂಕೆ ಪಕ್ಷದ ಇತಿಹಾಸದಲ್ಲೇ ಮೊದಲು ಎಂಬಂತೆ ಡಿಸಿಎಂ ಉದಯನಿಧಿ ಸ್ಟಾಲಿನ್ ಅವರು ದೀಪಾವಳಿಯ ಶುಭ ಕೋರಿದ್ದಾರೆ.
ಇದುವರೆಗೂ ಡಿಎಂಕೆ ಪಕ್ಷದಲ್ಲಿ ಯಾರೂ ಕೂಡ ಹಬ್ಬದ ಶುಭಾಶಯ ಕೋರಿರಲಿಲ್ಲ. ಡಿಎಂಕೆ ನಾಯಕರು ಕರುಣಾನಿಧಿ ಆರಂಭಿಸಿದ್ದ ಎಲ್ಲಾ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿಕೊಂಡು ಬಂದಿದ್ದರು. ಆದರೆ ಈ ಸಂಪ್ರದಾಯವನ್ನು ಉದಯನಿಧಿ ಸ್ಟಾಲಿನ್ ಮುರಿದು ಹಾಕಿದ್ದಾರೆ.
ಹಬ್ಬದ ಶುಭಾಶಯ ಕೋರುವುದರಲ್ಲೂ ವ್ಯಂಗ್ಯವಾಡಿರುವ ಉದಯನಿಧಿ ಅವರು, ನಂಬಿಕೆ ಹೊಂದಿರುವವರಿಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಹೇಳಿದ್ದು, ಬಿಜೆಪಿಯ ಕಾಲೆಳೆದಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಗೆ ವಿರೋಧ ಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದೆ.
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…