ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಟ ವಿಜಯ್ ಆಕ್ರೋಶ ಹೊರಹಾಕಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತಿದೆ. ಯುವಕರನ್ನು ಮಾದಕ ವಸ್ತುಗಳ ವ್ಯಸನದಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಡಿಎಂಕೆ ಸರ್ಕಾರ ಈ ವಿಚಾರದಲ್ಲಿ ಸಂಪೂರ್ಣವಾಗಿ ಸೋಲು ಕಂಡಿದೆ. ಇದು ರಾಜ್ಯದ ಮಟ್ಟಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ರಾಜ್ಯಕ್ಕೆ ಉತ್ತಮ ನಾಯಕರ ಅಗತ್ಯತೆ ಇದೆ ಎಂದು ವಿಜಯ್ ಅಭಿಪ್ರಾಯಪಟ್ಟಿದ್ದಾರೆ.
2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಪಕ್ಷ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತ್ತೀಚೆಗಷ್ಟೇ ನಟ ವಿಜಯ್ ತೀರ್ಮಾನಿಸಿದ್ದು, ಇದೀಗ ತಮ್ಮ ರಾಜಕೀಯ ಹೋರಾಟದ ಮೊದಲ ಹೆಚ್ಚೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಡ್ರಗ್ಸ್ ಚಾಟಿ ಬೀಸಿದ್ದಾರೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…