ದೇಶ- ವಿದೇಶ

ತಮಿಳುನಾಡು: ಸಿಎಂ ಸ್ಟಾಲಿನ್‌ ವಿರುದ್ಧ ತಳಪತಿ ವಿಜಯ್‌ ವಾಗ್ದಾಳಿ

ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್‌ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್‌ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್‌ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಟ ವಿಜಯ್‌ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತಿದೆ. ಯುವಕರನ್ನು ಮಾದಕ ವಸ್ತುಗಳ ವ್ಯಸನದಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಡಿಎಂಕೆ ಸರ್ಕಾರ ಈ ವಿಚಾರದಲ್ಲಿ ಸಂಪೂರ್ಣವಾಗಿ ಸೋಲು ಕಂಡಿದೆ. ಇದು ರಾಜ್ಯದ ಮಟ್ಟಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ರಾಜ್ಯಕ್ಕೆ ಉತ್ತಮ ನಾಯಕರ ಅಗತ್ಯತೆ ಇದೆ ಎಂದು ವಿಜಯ್‌ ಅಭಿಪ್ರಾಯಪಟ್ಟಿದ್ದಾರೆ.

2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್‌ ಅವರ ಪಕ್ಷ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತ್ತೀಚೆಗಷ್ಟೇ ನಟ ವಿಜಯ್‌ ತೀರ್ಮಾನಿಸಿದ್ದು, ಇದೀಗ ತಮ್ಮ ರಾಜಕೀಯ ಹೋರಾಟದ ಮೊದಲ ಹೆಚ್ಚೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಡ್ರಗ್ಸ್‌ ಚಾಟಿ ಬೀಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

12 mins ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

15 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ ; ಬಿಜೆಪಿಗೆ ತಮಿಳುನಾಡು, ಪಶ್ಚಿಮ ಬಂಗಾಳವೇ ತಲೆನೋವು

ದೆಹಲಿ ಕಣ್ಣೋಟ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ವಿರುದ್ಧ ಕಳೆದ ಒಂದೂವರೆ ತಿಂಗಳಿಂದ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಇಂಧನ ಮತ್ತು ಅನಿಲ…

38 mins ago

ನನ್ನ ಮೊದಲ ಕವಿತೆಯ ಕಥೆ….

ಕನ್ನಡದ ನಾಲ್ವರು ಖ್ಯಾತ ಕವಿಗಳು ತಮ್ಮ ಮೊದಲ ಕವಿತೆಯ ನೆನಪಲ್ಲಿ ಹೇಗೆ ಕಳೆದು ಹೋಗಿದ್ದಾರೆ ನೋಡಿ. ಬಹುಶಃ, ಮೊದಲ ಕವಿತೆ…

1 hour ago

ಅಣ್ಣಯ್ಯ ಸೇರಿ ಐವರಿಗೆ ಅಂಬೇಡ್ಕರ್‌ ಪ್ರಶಸ್ತಿ

ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್…

2 hours ago

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

2 hours ago