ಚೆನ್ನೈ: ರಾಜಕೀಯಕ್ಕೆ ಬರುವ ಹಾದಿಯಲ್ಲಿ ನಿಂತಿರುವ ತಮಿಳು ನಟ ತಳಪತಿ ವಿಜಯ್ ಇದೇ ಮೊದಲ ಬಾರಿಗೆ ತಮಿಳುನಾಡಿನ ಆಢಳಿತರೂಢ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿಸ್ ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಹತ್ತಿಕ್ಕುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ನಟ ವಿಜಯ್ ಆಕ್ರೋಶ ಹೊರಹಾಕಿದ್ದಾರೆ.
ತಮಿಳುನಾಡು ರಾಜ್ಯದಲ್ಲಿ ಮಾದಕ ವಸ್ತುಗಳನ್ನು ಎಗ್ಗಿಲ್ಲದೆ ಹಂಚಲಾಗುತ್ತಿದೆ. ಯುವಕರನ್ನು ಮಾದಕ ವಸ್ತುಗಳ ವ್ಯಸನದಿಂದ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆದರೆ, ಡಿಎಂಕೆ ಸರ್ಕಾರ ಈ ವಿಚಾರದಲ್ಲಿ ಸಂಪೂರ್ಣವಾಗಿ ಸೋಲು ಕಂಡಿದೆ. ಇದು ರಾಜ್ಯದ ಮಟ್ಟಿಗೆ ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ ರಾಜ್ಯಕ್ಕೆ ಉತ್ತಮ ನಾಯಕರ ಅಗತ್ಯತೆ ಇದೆ ಎಂದು ವಿಜಯ್ ಅಭಿಪ್ರಾಯಪಟ್ಟಿದ್ದಾರೆ.
2026 ರಲ್ಲಿ ನಡೆಯುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಪಕ್ಷ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇತ್ತೀಚೆಗಷ್ಟೇ ನಟ ವಿಜಯ್ ತೀರ್ಮಾನಿಸಿದ್ದು, ಇದೀಗ ತಮ್ಮ ರಾಜಕೀಯ ಹೋರಾಟದ ಮೊದಲ ಹೆಚ್ಚೆ ಇಟ್ಟಿದ್ದು, ಆಡಳಿತಾರೂಢ ಡಿಎಂಕೆ ಪಕ್ಷಕ್ಕೆ ಡ್ರಗ್ಸ್ ಚಾಟಿ ಬೀಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…