ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿತ್ತು. ಬಿಎನ್ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಇದರೊಂದಿಗೆ ಮಾಜಿ ಪ್ರಧಾನಿ, ಇತ್ತೀಚಿಗೆ ನಿಧನ ಹೊಂದಿದ ಖಲೀದಾ ಜಿಯಾ ಅವರ ಪುತ್ರ ತಾರಿಖ್ ರೆಹಮಾನ್ ಹೊಸ ಪ್ರಧಾನಿಯಾಗುವುದು ನಿಚ್ಚಳವಾಗಿದೆ.
2024ರ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಆಡಳಿತ ಪತನಗೊಂಡಿತ್ತು. ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಮಧ್ಯಂತರ ಸರ್ಕಾರದ ಬದಲು ಜನರಿಂದ ನೇರವಾಗಿ ಆಯ್ಕೆಯಾದ ಸರ್ಕಾರದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಪ್ರಧಾನಿ ಮೋದಿ ಅಭಿನಂದನೆ
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾ ಜನರು ನಿಮ್ಮ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯನ್ನು ತೋರಿಸುತ್ತಿದೆ. ಭಾರತ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಮುಂದುವರಿಸುತ್ತದೆ. ನಮ್ಮ ಸಂಬಂಧಗಳನ್ನು ಬಲಪಡಿಸಲು ಹಾಗು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…