ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿತ್ತು. ಬಿಎನ್ಪಿ 212 ಸ್ಥಾನಗಳಲ್ಲಿ ಗೆದ್ದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಇದರೊಂದಿಗೆ ಮಾಜಿ ಪ್ರಧಾನಿ, ಇತ್ತೀಚಿಗೆ ನಿಧನ ಹೊಂದಿದ ಖಲೀದಾ ಜಿಯಾ ಅವರ ಪುತ್ರ ತಾರಿಖ್ ರೆಹಮಾನ್ ಹೊಸ ಪ್ರಧಾನಿಯಾಗುವುದು ನಿಚ್ಚಳವಾಗಿದೆ.
2024ರ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಆಡಳಿತ ಪತನಗೊಂಡಿತ್ತು. ನಂತರ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಮಧ್ಯಂತರ ಸರ್ಕಾರದ ಬದಲು ಜನರಿಂದ ನೇರವಾಗಿ ಆಯ್ಕೆಯಾದ ಸರ್ಕಾರದ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.
ಪ್ರಧಾನಿ ಮೋದಿ ಅಭಿನಂದನೆ
ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದ ತಾರಿಕ್ ರೆಹಮಾನ್ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು ಬಾಂಗ್ಲಾ ಜನರು ನಿಮ್ಮ ನಾಯಕತ್ವದ ಮೇಲಿಟ್ಟಿರುವ ನಂಬಿಕೆಯನ್ನು ತೋರಿಸುತ್ತಿದೆ. ಭಾರತ ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಬೆಂಬಲವಾಗಿ ನಿಲ್ಲುವುದನ್ನು ಮುಂದುವರಿಸುತ್ತದೆ. ನಮ್ಮ ಸಂಬಂಧಗಳನ್ನು ಬಲಪಡಿಸಲು ಹಾಗು ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…