ದೇಶ- ವಿದೇಶ

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಚಿವ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು, ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.

ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುಧೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ. ಶ್ರೀಕೃಷ್ಣನು ಅರ್ಜುನನಿಗೆ ಬೋಧಿಸಿದ ಭಗವದ್ಗೀತೆಯು ಪರಮ ಜ್ಞಾನವಾಗಿದ್ದು, ಇದು ನಿಷ್ಕಾಮ ಕರ್ಮ ಮತ್ತು ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ಪ್ರತಿಯೊಬ್ಬರ ಕರ್ತವ್ಯವನ್ನು ನಿರ್ವಹಿಸುವ ಮಹತ್ವವನ್ನು ಒತ್ತಿ ಹೇಳುತ್ತದೆ. ಈ ಮೌಲ್ಯಗಳು ವಿಶೇಷವಾಗಿ ಪ್ರಸ್ತುತ ಜಾಗತಿಕ ಪರಿಸರದಲ್ಲಿ ಅಪಾರ ಪ್ರಸ್ತುತತೆಯನ್ನು ಹೊಂದಿವೆ ಎಂದು ಸಚಿವ ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

ಇದನ್ನು ಓದಿ: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ಇತ್ತೀಚೆಗೆ ಪ್ರಧಾನ ಮಂತ್ರಿಗಳು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗೀತಾ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಅವರು ಹಿಂದೂ ಧರ್ಮದ ಮೂಲ ತತ್ವಗಳನ್ನು ಎತ್ತಿಹಿಡಿದು ವಸುಧೈವ ಕುಟುಂಬ ಪರಿಕಲ್ಪನೆಯ ಬಗ್ಗೆ ಒತ್ತಿ ಹೇಳಿದರು ಮತ್ತು ಆ ಪವಿತ್ರ ಗ್ರಂಥ ಹೊಂದಿರುವ ಕಾಲಾತೀತ ಮೌಲ್ಯಗಳನ್ನು ಪುನರುಚ್ಚರಿಸಿದರು ಎಂಬುದನ್ನು ಶಿಕ್ಷಣ ಸಚಿವರಿಗೆ ಬರೆದಿರುವ ಪತ್ರದಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಇದಲ್ಲದೆ, ಶಿವಮೊಗ್ಗದಲ್ಲಿ ನಡೆದ ಗೀತಾ ಪಠಣ ಕಾರ್ಯಕ್ರಮಕ್ಕೆ ಹಾಜರಾಗುವ ಸೌಭಾಗ್ಯ ನನಗೂ ಸಿಕ್ಕಿತ್ತು. ಅದೊಂದು ಸ್ಫೂರ್ತಿದಾಯಕ ಕಾರ್ಯಕ್ರಮವಾಗಿತ್ತು. ಗೀತೆಯನ್ನು ಪಠಿಸಲು ಮತ್ತು ಅದಕ್ಕೆ ಸಂಬಂಧಿಸಿದ ಆಳವಾದ ಶಕ್ತಿ ಮತ್ತು ಭಕ್ತಿಯನ್ನು ಅನುಭವಿಸಲು ಇದು ಅದ್ಭುತ ಅವಕಾಶವನ್ನು ನೀಡಿತು ಎಂದಿರುವ ಸಚಿವ ಕುಮಾರಸ್ವಾಮಿ ಅವರು; ಈ ಸಂದರ್ಭದಲ್ಲಿ, ಹಲವಾರು ಸ್ಥಳೀಯ ನಾಯಕರು ಮತ್ತು ಪೋಷಕರು ಭಗವದ್ಗೀತೆಯ ಬೋಧನೆಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕೆಂದು ವಿನಂತಿಸಿದರು ಎಂಬ ಅಂಶದ ಬಗ್ಗೆ ಕುಮಾರಸ್ವಾಮಿ ಅವರು ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೌಲ್ಯಾಧರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುತ್ತದೆ. ಗೀತೆಯಿಂದ ಆಯ್ದ ಬೋಧನೆಗಳನ್ನು ಪರಿಚಯಿಸುವುದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಶಕ್ತಿ, ಚಿಂತನೆಯ ಸ್ಪಷ್ಟತೆ ಮತ್ತು ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡುತ್ತದೆ. ಇದರಿಂದಾಗಿ ನಮ್ಮ ಜನಸಂಖ್ಯಾ ಲಾಭಾಂಶವನ್ನು ಬಲಪಡಿಸುತ್ತದೆ ಮತ್ತು ನಮ್ಮ ಯುವಕರು ಜಾಗತಿಕವಾಗಿ ಶ್ರೇಷ್ಠರಾಗಲು ಪ್ರೇರಕವಾಗುತ್ತದೆ. ಆದ್ದರಿಂದ, ಭಗವದ್ಗೀತೆಯ ಕಾಲಾತೀತ ಮೌಲ್ಯಗಳನ್ನು ದೇಶಾದ್ಯಂತದ ವಿದ್ಯಾರ್ಥಿಗಳ ಕಲಿಕೆಯ ಚೌಕಟ್ಟಿನಲ್ಲಿ ಅರ್ಥಪೂರ್ಣವಾಗಿ ಸಂಯೋಜಿಸಲು ಈ ಪ್ರಸ್ತಾವನೆಗೆ ಸರಿಯಾದ ಪರಿಗಣನೆಯನ್ನು ನೀಡಿ ಸೂಕ್ತ ನಿರ್ದೇಶನಗಳನ್ನು ನೀಡಬೇಕೆಂದು ಶಿಕ್ಷಣ ಸಚಿವರನ್ನು ಕುಮಾರಸ್ವಾಮಿ ಅವರು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

9 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

9 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

12 hours ago