ದೇಶ- ವಿದೇಶ

ಶಂಭುಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಶೆಲ್‌ ಪ್ರಯೋಗ

ಚಂಡೀಘಡ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದೆಹಲಿ ಚಲೋ ನಡೆಸುತ್ತಿದ್ದ ನೂರಾರು ರೈತರ ಗುಂಪನ್ನು ತಡೆಯಲು ಪೊಲೀಸರು ಶಂಭು ಗಡಿಯಲ್ಲಿ ಅಶ್ರುವಾಯು ಶೆಲ್‌ ಪ್ರಯೋಗ ಮಾಡಿದ್ದಾರೆ.

ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ನೀವು ಮುಂದುವರಿಯಬೇಡಿ ಎಂದು ಪೊಲೀಸರು ರೈತರಿಗೆ ಹೇಳಿದ್ದಾರೆ.

ರೈತರನ್ನು ತಡೆಯಲು ಬ್ಯಾರಿಕೇಡ್‌ಗಳನ್ನು ಹಾಗೂ ಕಬ್ಬಿಣದ ಮೆಶ್‌ಗಳನ್ನು ಅಳವಡಿಸಲಾಗಿದೆ.

ಶಂಭು ಗಡಿಯಿಂದ ಇಂದು ದೆಹಲಿಗೆ ಮೆರವಣಿಗೆ ಹೊರಟಿದ್ದ ರೈತರನ್ನು ಅನುಮತಿ ಪತ್ರ ತೋರಿಸುವಂತೆ ಕೇಳಿದ್ದಾರೆ.

ಗುರುತಿನ ಚೀಟಿ ನೀಡಲು ನಿರಾಕರಿಸಿದ ರೈತರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುನ್ನುಗ್ಗಲು ಪ್ರಯತ್ನ ಮಾಡಿದ್ದಾರೆ. ಈ ವೇಳೆ ರೈತರನ್ನು ಚದುರಿಸಲು ಅಶ್ರುವಾಯು ಶೆಲ್‌ ಸಿಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಗುರುತಿನ ಚೀಟಿಗಳನ್ನು ನೀಡುತ್ತೇವೆ. ಆದರೆ ಅವರು ನಮಗೆ ದಿಲ್ಲಿಗೆ ಹೋಗಲು ಅನುಮತಿ ನೀಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

1 hour ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago