ಹೊಸದಿಲ್ಲಿ : ಹಾಂಗ್ ಕಾಂಗ್ ನಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಶಂಕಿತ ತಾಂತ್ರಿಕ ದೋಷದ ಬಗ್ಗೆ ಪೈಲಟ್ ವರದಿ ಮಾಡಿದ ನಂತರ ವಿಮಾನ ಮಧ್ಯದಲ್ಲೇ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಎ-1315 ಸೋಮವಾರ ಬೆಳಿಗ್ಗೆ ಹಾಂಗ್ ಕಾಂಗ್ನಿಂದ ಹೊರಟು ಹೊಸದಿಲ್ಲಿಗೆ ತೆರಳುತ್ತಿದ್ದಾಗ ಸಮಸ್ಯೆ ಕಂಡುಬಂದಿದೆ. ಪ್ರಮಾಣಿತ ಸುರಕ್ಷತಾ ಶಿಷ್ಟಾಚಾರದ ಪ್ರಕಾರ, ಪೈಲಟ್ ತನ್ನ ಮೂಲ ಸ್ಥಳಕ್ಕೆ ಮರಳಲು ನಿರ್ಧರಿಸಿದರು. ಶಂಕಿತ ತಾಂತ್ರಿಕ ದೋಷದ ವಿವರಗಳನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ವಿಮಾನವು ಹಾಂಗ್ ಕಾಂಗ್ನಲ್ಲಿ ಸುರಕ್ಷಿತವಾಗಿ ಇಳಿದಿದೆ.
ಟೇಕ್ ಆಫ್ ಆದ 90 ನಿಮಿಷಗಳಲ್ಲಿ ಹಾಂಗ್ ಕಾಂಗ್ ವಿಮಾನ ನಿಲ್ದಾಣಕ್ಕೆ ಮರಳಿದೆ. ತಾಂತ್ರಿಕ ಸಮಸ್ಯೆಯ ಸ್ವರೂಪ ಅಥವಾ ವಿಮಾನದ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ಏರ್ ಇಂಡಿಯಾ ಇನ್ನೂ ಯಾವುದೇ ಹೇಳಿಕೆಯನ್ನು ನೀಡಿಲ್ಲ.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…