ಹೊಸದಿಲ್ಲಿ : ಹಾಂಗ್ ಕಾಂಗ್ ನಿಂದ ಹೊಸದಿಲ್ಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಶಂಕಿತ ತಾಂತ್ರಿಕ ದೋಷದ ಬಗ್ಗೆ ಪೈಲಟ್ ವರದಿ ಮಾಡಿದ ನಂತರ ವಿಮಾನ ಮಧ್ಯದಲ್ಲೇ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಎ-1315 ಸೋಮವಾರ ಬೆಳಿಗ್ಗೆ ಹಾಂಗ್ ಕಾಂಗ್ನಿಂದ ಹೊರಟು ಹೊಸದಿಲ್ಲಿಗೆ ತೆರಳುತ್ತಿದ್ದಾಗ ಸಮಸ್ಯೆ ಕಂಡುಬಂದಿದೆ. ಪ್ರಮಾಣಿತ ಸುರಕ್ಷತಾ ಶಿಷ್ಟಾಚಾರದ ಪ್ರಕಾರ, ಪೈಲಟ್ ತನ್ನ ಮೂಲ ಸ್ಥಳಕ್ಕೆ ಮರಳಲು ನಿರ್ಧರಿಸಿದರು. ಶಂಕಿತ ತಾಂತ್ರಿಕ ದೋಷದ ವಿವರಗಳನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಲಾಗಿಲ್ಲ. ವಿಮಾನವು ಹಾಂಗ್ ಕಾಂಗ್ನಲ್ಲಿ ಸುರಕ್ಷಿತವಾಗಿ ಇಳಿದಿದೆ.
ಟೇಕ್ ಆಫ್ ಆದ 90 ನಿಮಿಷಗಳಲ್ಲಿ ಹಾಂಗ್ ಕಾಂಗ್ ವಿಮಾನ ನಿಲ್ದಾಣಕ್ಕೆ ಮರಳಿದೆ. ತಾಂತ್ರಿಕ ಸಮಸ್ಯೆಯ ಸ್ವರೂಪ ಅಥವಾ ವಿಮಾನದ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ಏರ್ ಇಂಡಿಯಾ ಇನ್ನೂ ಯಾವುದೇ ಹೇಳಿಕೆಯನ್ನು ನೀಡಿಲ್ಲ.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…