ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ರಾಷ್ಟ್ರೀಯ ಜನತಾ ದಳ ಮತ್ತು ಜನತಾ ದಳ (ಯುನೈಟೆಡ್) ಸಮ್ಮಿಶ್ರ ಸರ್ಕಾರವು ಕನಿಷ್ಠ 10 ಲಕ್ಷ ಉದ್ಯೋಗ ಸೃಷ್ಠಿಯೊಂದಿಗೆ ವಿವಿಧ ವಲಯಗಳಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗಾವಕಾಶ ನೀಡಲಾಗುವುದು ಎಂದಿದ್ದಾರೆ. ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ. ಇದನ್ನು ಈಡೇರಿಸಲು ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನಿಸುತ್ತೇವೆ ಎಂದು ನಿತೀಶ್ ಹೇಳಿದ್ದಾರೆ.
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.…
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಸ್ಟಾರ್ ವಾರ್ ಬಗ್ಗೆ ನಟ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯುದ್ಧಕ್ಕೆ ಸಿದ್ಧ ಮಾತಿಗೆ…
ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್…
ರಾಜ್ಯದಲ್ಲಿ ೩೧೫ ಕುಸ್ತಿಪಟುಗಳಿಗೆ ಉಚಿತವಾಗಿ ನುರಿತ ಕುಸ್ತಿ ತರಬೇತುದಾರರಿಂದ ವೈಜ್ಞಾನಿಕ ಕ್ರೀಡಾ ತರಬೇತಿ ನೀಡಲಾಗುತ್ತಿದೆ ಹಾಗೂ ರಾಜ್ಯದಲ್ಲಿ ಕ್ರೀಡಾ ಅಭಿವೃದ್ಧಿಗಾಗಿ…
ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಸಭ್ಯ ಉಡುಪುಗಳನ್ನು ಧರಿಸಿಕೊಂಡು ಬರುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿರುವುದು ಸ್ವಾಗತಾರ್ಹವಾಗಿದೆ. ಕೆಲವು…
ಮೈಸೂರಿನ ಲಲಿತಾದ್ರಿಪುರ ರಿಂಗ್ ರಸ್ತೆಯಲ್ಲಿರುವ ಮಾರ್ವೆಲ್ ಶಾಲಾ- ಕಾಲೇಜು ಮುಂಭಾಗದಿಂದ ಸ್ವಲ್ಪ ದೂರ ಸಾಗಿದರೆ ವರುಣ ನಾಲೆ ಕಾಲುವೆ ಸಿಗುತ್ತದೆ.…