ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ರಾಷ್ಟ್ರೀಯ ಜನತಾ ದಳ ಮತ್ತು ಜನತಾ ದಳ (ಯುನೈಟೆಡ್) ಸಮ್ಮಿಶ್ರ ಸರ್ಕಾರವು ಕನಿಷ್ಠ 10 ಲಕ್ಷ ಉದ್ಯೋಗ ಸೃಷ್ಠಿಯೊಂದಿಗೆ ವಿವಿಧ ವಲಯಗಳಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗಾವಕಾಶ ನೀಡಲಾಗುವುದು ಎಂದಿದ್ದಾರೆ. ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ. ಇದನ್ನು ಈಡೇರಿಸಲು ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನಿಸುತ್ತೇವೆ ಎಂದು ನಿತೀಶ್ ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…