ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ರಾಷ್ಟ್ರೀಯ ಜನತಾ ದಳ ಮತ್ತು ಜನತಾ ದಳ (ಯುನೈಟೆಡ್) ಸಮ್ಮಿಶ್ರ ಸರ್ಕಾರವು ಕನಿಷ್ಠ 10 ಲಕ್ಷ ಉದ್ಯೋಗ ಸೃಷ್ಠಿಯೊಂದಿಗೆ ವಿವಿಧ ವಲಯಗಳಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗಾವಕಾಶ ನೀಡಲಾಗುವುದು ಎಂದಿದ್ದಾರೆ. ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ. ಇದನ್ನು ಈಡೇರಿಸಲು ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನಿಸುತ್ತೇವೆ ಎಂದು ನಿತೀಶ್ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…