ಪಟನಾ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವ ಜನತೆಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಘೋಷಿಸಿದ್ದಕ್ಕೆ ಬೆಂಬಲ ನೀಡಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್ ಇಂದು (ಸೋಮವಾರ) ಉದ್ಯೋಗಾವಕಾಶಗಳನ್ನು ದುಪ್ಪಟ್ಟು ಮಾಡುವುದಾಗಿ ಘೋಷಿಸಿದ್ದಾರೆ. ಪಟನಾದ ಗಾಂಧಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ನಿತೀಶ್ ಕುಮಾರ್ ರಾಷ್ಟ್ರೀಯ ಜನತಾ ದಳ ಮತ್ತು ಜನತಾ ದಳ (ಯುನೈಟೆಡ್) ಸಮ್ಮಿಶ್ರ ಸರ್ಕಾರವು ಕನಿಷ್ಠ 10 ಲಕ್ಷ ಉದ್ಯೋಗ ಸೃಷ್ಠಿಯೊಂದಿಗೆ ವಿವಿಧ ವಲಯಗಳಲ್ಲಿ ಹೆಚ್ಚುವರಿ 10 ಲಕ್ಷ ಉದ್ಯೋಗಾವಕಾಶ ನೀಡಲಾಗುವುದು ಎಂದಿದ್ದಾರೆ. ರಾಜ್ಯದ ಮಕ್ಕಳಿಗಾಗಿ ನಾವು ಎಷ್ಟು ಸಾಧ್ಯವೋ ಅಷ್ಟು ಉದ್ಯೋಗ ಮತ್ತು ಉದ್ಯೋಗಾವಕಾಶಗಳನ್ನು ರಾಜ್ಯದ ಹೊರಗೆ ಮತ್ತು ಒಳಗೆ ಸೃಷ್ಟಿಸುತ್ತೇವೆ. ನಾವು ಇದರಲ್ಲಿ ಯಶಸ್ವಿಯಾದರೆ ಇದನ್ನು ನಾವು 20 ಲಕ್ಷಕ್ಕೆ ಏರಿಸಲಿದ್ದೇವೆ. ಇದನ್ನು ಈಡೇರಿಸಲು ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನಿಸುತ್ತೇವೆ ಎಂದು ನಿತೀಶ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…
ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…
ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…
ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…
ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…
ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…