Mysore
32
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

ತೆಲಂಗಾಣ ಸುರಂಗ ಕುಸಿದ ದುರಂತ : ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ಸೇರ್ಪಡೆ

ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಕುಸಿದಿರುವ ಸುರಂಗದೊಳಗೆ ಕಳೆದ 48 ಗಂಟೆಗಳಿಂದ ಸಿಲುಕಿಕೊಂಡಿರುವ ಎಂಟು ಕಾರ್ಮಿಕರನ್ನು ಹೊರತರಲು ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಚರಣೆ ಮಾಡುತ್ತಿವೆ. ಇದೀಗ ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ತಂಡದ ಸೇರ್ಪಡೆಯಾಗಿದೆ.

ಸುರಂಗದೊಳಗೆ ಬಿದ್ದಿರುವ ಮಣ್ಣಿನ ರಾಶಿ ಮತ್ತು ನೀರು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ರಾಜ್ಯದ ಸಚಿವರು ಹೇಳಿದ್ದಾರೆ.

ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಇರುವ 44 ಕಿಮೀ ಉದ್ದದ ಸುರಂಗವು, ಶನಿವಾರ ಬೆಳಿಗ್ಗೆ ಕೆಲವು ಕಾರ್ಮಿಕರು ಒಳಗೆ ಸೋರಿಕೆಯನ್ನು ಸರಿಪಡಿಸುತ್ತಿದ್ದಾಗ ಕುಸಿದು ಬಿದ್ದಿತು. ಹೆಚ್ಚಿನ ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಎಂಟು ಮಂದಿ ಒಳಗೆ ಸಿಕ್ಕಿಹಾಕಿಕೊಂಡು ಶನಿವಾರದಿಂದ ಸಂಪರ್ಕ ಕಳೆದುಕೊಂಡಿದ್ದಾರೆ.

ಸುರಂಗದೊಳಗೆ ಕೆಸರು ತುಂಬಾ ಎತ್ತರಕ್ಕೆ ಸಂಗ್ರಹವಾಗಿದ್ದು, ನಡೆಯಲು ಅಸಾಧ್ಯವಾಗಿದೆ. ರಕ್ಷಣಾ ತಂಡವು ರಬ್ಬರ್ ಟ್ಯೂಬ್‍ಗಳು ಮತ್ತು ಮರದ ಹಲಗೆಗಳನ್ನು ಬಳಸುತ್ತಿದೆ. ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ಕ್ಷೀಣಿಸಿದೆ. ಆದರೆ ನಾವು ಆಶಾವಾದಿಗಳಾಗಿz?ದÉ?ವೆ. ಪ್ರಯತ್ನವನ್ನು ಮುಂದುವರಿಸಿz?ದÉ?ವೆ ಎಂದು ಬಚಿವ ರಾವ್ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಾಗುತ್ತಿದೆ. ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿನ್ನೆ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಸಹಾಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Tags:
error: Content is protected !!