ದೇಶ- ವಿದೇಶ

ತೆಲಂಗಾಣ ಸುರಂಗ ಕುಸಿದ ದುರಂತ : ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ಸೇರ್ಪಡೆ

ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಕುಸಿದಿರುವ ಸುರಂಗದೊಳಗೆ ಕಳೆದ 48 ಗಂಟೆಗಳಿಂದ ಸಿಲುಕಿಕೊಂಡಿರುವ ಎಂಟು ಕಾರ್ಮಿಕರನ್ನು ಹೊರತರಲು ರಕ್ಷಣಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಚರಣೆ ಮಾಡುತ್ತಿವೆ. ಇದೀಗ ರಕ್ಷಣಾ ಕಾರ್ಯಕ್ಕೆ ಸಿಲ್ಕ್ಯಾರಾ ತಂಡದ ಸೇರ್ಪಡೆಯಾಗಿದೆ.

ಸುರಂಗದೊಳಗೆ ಬಿದ್ದಿರುವ ಮಣ್ಣಿನ ರಾಶಿ ಮತ್ತು ನೀರು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ಕಡಿಮೆ ಎಂದು ರಾಜ್ಯದ ಸಚಿವರು ಹೇಳಿದ್ದಾರೆ.

ನಾಗರ್ಕರ್ನೂಲ್‍ನ ಶ್ರೀಶೈಲಂ ಅಣೆಕಟ್ಟೆಯ ಹಿಂದೆ ಇರುವ 44 ಕಿಮೀ ಉದ್ದದ ಸುರಂಗವು, ಶನಿವಾರ ಬೆಳಿಗ್ಗೆ ಕೆಲವು ಕಾರ್ಮಿಕರು ಒಳಗೆ ಸೋರಿಕೆಯನ್ನು ಸರಿಪಡಿಸುತ್ತಿದ್ದಾಗ ಕುಸಿದು ಬಿದ್ದಿತು. ಹೆಚ್ಚಿನ ಕಾರ್ಮಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಎಂಟು ಮಂದಿ ಒಳಗೆ ಸಿಕ್ಕಿಹಾಕಿಕೊಂಡು ಶನಿವಾರದಿಂದ ಸಂಪರ್ಕ ಕಳೆದುಕೊಂಡಿದ್ದಾರೆ.

ಸುರಂಗದೊಳಗೆ ಕೆಸರು ತುಂಬಾ ಎತ್ತರಕ್ಕೆ ಸಂಗ್ರಹವಾಗಿದ್ದು, ನಡೆಯಲು ಅಸಾಧ್ಯವಾಗಿದೆ. ರಕ್ಷಣಾ ತಂಡವು ರಬ್ಬರ್ ಟ್ಯೂಬ್‍ಗಳು ಮತ್ತು ಮರದ ಹಲಗೆಗಳನ್ನು ಬಳಸುತ್ತಿದೆ. ಕಾರ್ಮಿಕರು ಬದುಕುಳಿಯುವ ಸಾಧ್ಯತೆಗಳು ಕ್ಷೀಣಿಸಿದೆ. ಆದರೆ ನಾವು ಆಶಾವಾದಿಗಳಾಗಿz?ದÉ?ವೆ. ಪ್ರಯತ್ನವನ್ನು ಮುಂದುವರಿಸಿz?ದÉ?ವೆ ಎಂದು ಬಚಿವ ರಾವ್ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಪರಿಸ್ಥಿತಿಯನ್ನು ಅವಲೋಕನ ಮಾಡಲಾಗುತ್ತಿದೆ. ತೆಲಂಗಾಣದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಿನ್ನೆ ಮುಖ್ಯಮಂತ್ರಿ ರೇವಂತ್ ರೆಡ್ಡಿಗೆ ಕರೆ ಮಾಡಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಸಹಾಯ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago