ದೇಶ- ವಿದೇಶ

ದೆಹಲಿಯಲ್ಲಿ ಭಯಾನಕ ಘಟನೆ…! ಗನ್‌ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ, ಮಹಡಿಯಿಂದ ನೂಕಿದ ದುಷ್ಕರ್ಮಿ

ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್‌ ಪಾಯಿಂಟ್‌ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ 5ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹೇಯ ಕೃತ್ಯ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಮಯದಲ್ಲಿ ದುಷ್ಕರ್ಮಿ ಆಕೆಯನ್ನು ಅಪಹರಿಸಿ ಸಮೀಪದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕಟ್ಟಡದ 5ನೇ ಮಹಡಿಯಿಂದ ಕೆಳಗೆ ತಳ್ಳಿದ್ದಾನೆ.

ಸಂತ್ರಸ್ತೆ ಬಾಲಕಿಯು ದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕಿಯ ಒಂದು ಕಾಲು ಮುರಿದಿದೆ.

ತನ್ನ ಮೇಲೆ ಅತ್ಯಾಚಾರ ಎಸಗಿ ಬಹುಮಹಡಿಯಿಂದ ಕಟ್ಟಡದಿಂದ ದೂಡಲಾಯಿತು ಎಂದು ಬಾಲಕಿಯು ಪೊಲೀಸರಿಗೆ ಹೇಳಿಕೆ ನೀಡಿದ್ದು, ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆಗಳ ವಿವಿಧ ಸೆಕ್ಸನ್‌ಗಳಡಿ ಪೊಲೀಸರು ಪ್ರಕರಣ  ದಾಖಲಿಸಿಕೊಂಡಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

8 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

8 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

8 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

8 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

20 hours ago