ನವದೆಹಲಿ: ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರದ ಭೀಕರತೆ ಕಣ್ಣಿಂದ ಮಾಸುವ ಮುನ್ನವೇ ಮತ್ತೊಂದು ಹೇಯ ಕೃತ್ಯ ದೆಹಲಿಯ ದ್ವಾರಕ ಪ್ರದೇಶದಲ್ಲಿ ನಡೆದಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗನ್ ಪಾಯಿಂಟ್ನಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ 5ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹೇಯ ಕೃತ್ಯ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಮನೆಯಲ್ಲಿ ಒಬ್ಬಳೆ ಇದ್ದ ಸಮಯದಲ್ಲಿ ದುಷ್ಕರ್ಮಿ ಆಕೆಯನ್ನು ಅಪಹರಿಸಿ ಸಮೀಪದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕಟ್ಟಡದ 5ನೇ ಮಹಡಿಯಿಂದ ಕೆಳಗೆ ತಳ್ಳಿದ್ದಾನೆ.
ಸಂತ್ರಸ್ತೆ ಬಾಲಕಿಯು ದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಾಲಕಿಯ ಒಂದು ಕಾಲು ಮುರಿದಿದೆ.
ತನ್ನ ಮೇಲೆ ಅತ್ಯಾಚಾರ ಎಸಗಿ ಬಹುಮಹಡಿಯಿಂದ ಕಟ್ಟಡದಿಂದ ದೂಡಲಾಯಿತು ಎಂದು ಬಾಲಕಿಯು ಪೊಲೀಸರಿಗೆ ಹೇಳಿಕೆ ನೀಡಿದ್ದು, ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೊ ಕಾಯ್ದೆಗಳ ವಿವಿಧ ಸೆಕ್ಸನ್ಗಳಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…