ದೇಶ- ವಿದೇಶ

ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಏಳು ಮಂದಿ ದುರ್ಮರಣ

ತಿರುಪತಿ: ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜನರು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು, ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್‌ ಪಡೆದುಕೊಳ್ಳುವ ಸಲುವಾಗಿ ಏಕಾಏಕಿ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ತಮಿಳುನಾಡಿನ ಸೇಲಂ ಮೂಲದ ಮಹಿಳೆ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರನ್ನು ಐಸಿಯುಗೆ ಶಿಫ್ಟ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ ನೀಡಿದ್ದು, ಘಟನೆಯಿಂದ ದಿಗ್ಬ್ರಾಂತನಾಗಿದ್ದೇನೆ. ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

10 mins ago

ಪುರುಷರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ; ಪುರುಷರ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ

ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…

45 mins ago

ಸಂವಿಧಾನದಿಂದಲೇ ನಾನಿಂದು ಮುಖ್ಯಮಂತ್ರಿ ಆಗಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…

59 mins ago

ಐಪಿಎಲ್‌ ಪಂದ್ಯ : ಏಪ್ರಿಲ್‌ 15, 24ರಂದು ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು : ಟಾಟಾ ಐಪಿಎಲ್‌ನ ಕ್ರಿಕೆಟ್‌ ಪಂದ್ಯಗಳು ಏಪ್ರಿಲ್ ‌15 ಹಾಗೂ ಏಪ್ರಿಲ್ ‌24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.…

1 hour ago

ನಿತೀಶ್ ಕುಮಾರ್ ರಾಜೀನಾಮೆ; ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಆಯ್ಕೆ

ಪಾಟ್ನಾ : ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪದವಿಗೆ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಹಾರದ ಹೊಸ…

1 hour ago

ಟಿಪ್ಪರ್-ಕಾರು ನಡುವೆ ಅಪಘಾತ : ತಾಯಿ ಮಗಳು ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ : ಕೇರಳ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ಗೆ ಕಾರುವೊಂದು ಡಿಕ್ಕಿ ಹೊಡೆದು ತಾಯಿ-ಮಗಳು ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಮಂಗಳವಾರ…

1 hour ago