ತಿರುಪತಿ: ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜನರು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು, ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್ ಪಡೆದುಕೊಳ್ಳುವ ಸಲುವಾಗಿ ಏಕಾಏಕಿ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ತಮಿಳುನಾಡಿನ ಸೇಲಂ ಮೂಲದ ಮಹಿಳೆ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ ನೀಡಿದ್ದು, ಘಟನೆಯಿಂದ ದಿಗ್ಬ್ರಾಂತನಾಗಿದ್ದೇನೆ. ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…