ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ನಾಗರಿಕರ ಮೇಲೆ ಫೈರಿಂಗ್ ನಡೆಸಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಗೆ ಸಿಲುಕಿ ಓರ್ವ ನಾಗರಿಕ ಸಾವನ್ನಪ್ಪಿದ್ದಾನೆ. ಉಗ್ರರಿಗಾಗಿ ಭಾರತೀಯ ಸೇನೆ ಹಾಗೂ ಪೊಲೀಸರಿಂದ ಹುಡುಕಾಟ ಶುರುವಾಗಿದೆ.
ಇನ್ನು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ 28 ಜನರನ್ನು ಬಲಿ ಪಡೆದ ಬೆನ್ನಲ್ಲೇ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ಚುರುಕುಗೊಳಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ನೆಲಸಮ ಮಾಡಲಾಗುತ್ತಿದ್ದು, ಈಗಾಗಲೇ 7 ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಈ ಬೆನ್ನಲ್ಲೇ ಈಗ ಮತ್ತೋರ್ವ ಉಗ್ರನ ಮನೆಯನ್ನು ಬಾಂಬ್ ಸ್ಫೋಟಿಸಿ ಧ್ವಂಸ ಮಾಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಸೇನಾಧಿಕಾರಿಗಳು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…