ದೇಶ- ವಿದೇಶ

ಮಾಸ್ಕೋ ಮಾಲ್‌ನಲ್ಲಿ ಉಗ್ರರ ದಾಳಿ : ಸಾರ್ವಜನಿಕರ ರಕ್ತದೋಕುಳಿ !

ಮಾಸ್ಕೋ: ರಷ್ಯಾದ ಮಾಸ್ಕೋದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಗುಂಡಿನ ದಾಳಿಗೆ ಮಾಲ್ ನಲ್ಲಿ ರಕ್ತದೋಕುಳಿಯೇ ಹರಿದಿದೆ.

ಕ್ರೋಕಸ್ ಸಿಟಿ ಹಾಲ್ ನಲ್ಲಿ ರಾಕ್ ಮ್ಯೂಸಿಕ್ ಕಾರ್ಯಕ್ರಮದ ವೇಳೆ ನಾಗರೀಕರ ನರಮೇಧ ನಡೆಸಲಾಗಿದೆ. ನಾಲ್ಕೈದು ಉಗ್ರರು ಮಾಲ್ ನಲ್ಲಿ ಗುಂಡಿನ ಸುರಿಮಳೆಗೈದಿದ್ದಾರೆ.

40ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಮುಂಬೈ ದಾಳಿ ಮಾದರಿಯಲ್ಲಿ ರಷ್ಯಾದಲ್ಲಿ ದಾಳಿ ನಡೆಸಲಾಗಿದ್ದು, ಎರಡು ದಶಕಗಳಲ್ಲಿ ರಷ್ಯಾದಲ್ಲಿ ನಡೆದ ಭೀಕರ ಉಗ್ರ ದಾಳಿ ಇದಾಗಿದೆ. ಐಎಸ್‌ಐಎಸ್ ದಾಳಿಯ ಹೊಣೆ ಹೊತ್ತುಕೊಂಡಿದೆ.

ಉಗ್ರರ ಗುಂಡಿನ ದಾಳಿಯ ಬಳಿಕ ಸ್ಪೋಟದಿಂದಾಗಿ ಕಟ್ಟಡ ಹೊತ್ತಿ ಉರಿದಿದೆ. ಐವರು ಭಯೋತ್ಪಾದಕರ ಪೈಕಿ ಓರ್ವನನ್ನು ಸೆರೆ ಹಿಡಿಯಲಾಗಿದೆ.

ಸಂಗೀತ ಕೇಳಲು ಬಂದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಮಾಲ್ ಸಭಾಂಗಣದಲ್ಲಿ ಪಿಕ್ನಿಕ್ ರಾಕ್ ಬ್ಯಾಂಡ್ ನಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಗೀತ ಕಾರ್ಯಕ್ರಮ ಶುರುವಾಗುವ ಮೊದಲೇ ಗುಂಡಿನ ದಾಳಿ ನಡೆಸಲಾಗಿದೆ.

ಸಾವಿರಾರು ಮಂದಿ ಕೂರಬಹುದಾದ ಹಾಲ್ ನಲ್ಲಿ ಭಾರಿ ಜನ ಸೇರಿದ್ದ ವೇಳೆಯಲ್ಲೇ ಐಸಿಸ್ ಉಗ್ರರು ದಾಳಿ ಮಾಡಿದ್ದಾರೆ.

ಜನರನ್ನು ಕೊಂದು ಹೊರ ಬಂದು ಬಾಂಬ್ ಸ್ಪೋಟಿಸಿದ್ದು, ಕಟ್ಟಡಕ್ಕೆ ಬೆಂಕಿ ತಗುಲಿದೆ. ಮೂರು ಹೆಲಿಕಾಪ್ಟರ್, ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಲಾಗಿ

andolanait

Recent Posts

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

30 mins ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

1 hour ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

1 hour ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

2 hours ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

2 hours ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago