ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಉಗ್ರರು ಮುಂಬರುವ ಜನವರಿ.26ರ ಗಣರಾಜ್ಯೋತ್ಸವದಂದು ಭಾರೀ ವಿಧ್ವಂಸಕ ಕೃತ್ಯ ನಡೆಸಲು ಹೊಂಚು ಹಾಕಿದ್ದು ಬೆಳಕಿಗೆ ಬಂದಿದೆ.
ಈ ಹಿಂದೆ ಇದೇ ಉಗ್ರರು ದೀಪಾವಳಿ ಹಬ್ಬದ ದಿನದಿಂದ ದೆಹಲಿಯ ವಿವಿಧ ಕಡೆ ಬಾಂಬ್ ಸ್ಫೋಟ ನಡೆಸುವ ಸಂಚು ರೂಪಿಸಿದ್ದರು. ಅದಕ್ಕೂ ಆಗಸ್ಟ್.15ರ ಸ್ವಾತಂತ್ರೋತ್ಸವದಂದು ರಕ್ತದೋಕುಳಿ ನಡೆಸಲು ಕಾರ್ಯತಂತ್ರ ರೂಪಿಸಲಾಗಿತ್ತು.
ಈ ಎರಡೂ ಹಬ್ಬಗಳಂದು ಉಗ್ರರು ದೇಶದ ವಿವಿಧೆಡೆ ಸ್ಫೋಟ ನಡೆಸಬಹುದೆಂಬ ಗುಪ್ತಚರ ವಿಭಾಗ ಎಚ್ಚರಿಸಿದ ಹಿನ್ನಲೆಯಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಬಿಗಿಭದ್ರತೆಯನ್ನು ಕೈಗೊಂಡ ಪರಿಣಾಮ ಯೋಜಿತ ಕಾರ್ಯ ವಿಫಲಗೊಂಡಿತ್ತು.
ಇದನ್ನು ಓದಿ: ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ
ಹೇಗಾದರೂ ಮಾಡಿ ಗಣರಾಜ್ಯೋತ್ಸವ ದಿನದಂದು ಬಾಂಬ್ ಸ್ಫೋಟಿಸಿದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತದೆ. ತಮ್ಮ ಯೋಜಿತ ಕಾರ್ಯವು ಅನುಷ್ಠಾನವಾಗುತ್ತದೆ ಎಂದು ಶಂಕಿತರು ಇದಕ್ಕಾಗಿ ಭಾರೀ ಕಾರ್ಯತಂತ್ರ ಹೆಣೆದಿದ್ದರು.
ಇದಕ್ಕಾಗಿಯೇ ಫರೀದಾಬಾದ್ನ ವೈದ್ಯರ ನಿವಾಸದಲ್ಲಿ ಮೂರುವರೆ ಸಾವಿರ ಕೆಜಿ ತೂಕದ ಸ್ಫೋಟಕ ವಸ್ತುಗಳು, ಬಾಂಬ್ಗಳು, ಎ.ಕೆ47 ಸೇರಿದಂತೆ ವಿವಿಧ ಶ್ರೇಣಿಯ ಸ್ಫೋಟಕಗಳ ವಸ್ತುಗಳನ್ನು ಗುಪ್ತಚರ ವಿಭಾಗದ ಮಾಹಿತಿ ಮೇರೆಗೆ ವಶಪಡಿಸಿಕೊಳ್ಳಲಾಯಿತು.
ಮೂಲಗಳ ಪ್ರಕಾರ, ಜನವರಿ 26ರಂದು ದೆಹಲಿಯಲ್ಲಿ ಬಹುಭಯೋತ್ಪಾದಕ ದಾಳಿಗಳನ್ನು ನಡೆಸುವ ಯೋಜನೆಯ ಭಾಗವಾಗಿ ಮುಜಮಿಲ್ ಮತ್ತು ಶಂಕಿತ ಆತ್ಮಹತ್ಯಾ ಬಾಂಬರ್ ಡಾ. ಉಮರ್ ನಬಿ ಈ ವರ್ಷದ ಆರಂಭದಲ್ಲಿ ಕೆಂಪು ಕೋಟೆ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದರು ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…