ನವದೆಹಲಿ: ನಕ್ಸಲರು ಈಗ ತಮ್ಮ ಮನೆಗಳಲ್ಲೂ ಸುರಕ್ಷಿತವಾಗಿಲ್ಲ, ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಎಚ್.ಟಿ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕೀಯಕ್ಕೆ ತಕ್ಕಂತೆ ನೀತಿಗಳನ್ನು ರೂಪಿಸುತ್ತಿದ್ದರೆ, ಪ್ರಸ್ತುತ ಸರ್ಕಾರವು ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಪುನಃಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತಿದೆ ಎಂದರು.
ನಮ್ಮ ಸರ್ಕಾರವು ಜನರ, ಜನರಿಂದ ಮತ್ತು ಜನರಿಗಾಗಿ ಪ್ರಗತಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇನ್ನು ತಮ್ಮ ಸರ್ಕಾರದ ಬಗ್ಗೆ ಸಂತಸ ವ್ಯಕ್ತಪಡಿಸಿ ಮಾತು ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಲವು ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತಿವೆ. ಆದರೆ ಭಾರತದಲ್ಲಿ ಜನರು ಮೂರನೇ ಬಾರಿಗೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಹಿಂದಿನ ಸರ್ಕಾರಗಳು ಚುನಾವಣೆಗಳನ್ನು ಗೆಲ್ಲಲು ನೀತಿಗಳನ್ನು ರೂಪಿಸುತ್ತಿದ್ದವು. ಆದರೆ ನಮ್ಮ ಸರ್ಕಾರ ಜನರ ನಂಬಿಕೆಯನ್ನು ಪುನಃಸ್ಥಾಪಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಇದೇ ವೇಳೆ ಭಯೋತ್ಪಾದಕ ದಾಳಿ ಬಗ್ಗೆ ಮಾತನಾಡಿದ ಅವರು, ಭಯೋತ್ಪಾದಕರು ಈಗ ತಮ್ಮ ಮನೆಗಳಲ್ಲೂ ಅಸುರಕ್ಷಿತ ಎಂಬ ಭಾವನೆ ಹೊಂದಿದ್ದಾರೆ. ಈಗ ಸಮಯ ಬದಲಾಗಿದೆ ಎಂದರು.
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…
ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ…