ಉಗ್ರರು ತಮ್ಮ ಮನೆಗಳಲ್ಲೂ ಸುರಕ್ಷಿತವಾಗಿರಲ್ಲ ಎಂದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನಕ್ಸಲರು ಈಗ ತಮ್ಮ ಮನೆಗಳಲ್ಲೂ ಸುರಕ್ಷಿತವಾಗಿಲ್ಲ, ಕಾಲ ಬದಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಎಚ್.ಟಿ ನಾಯಕತ್ವ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ವೋಟ್‌ ಬ್ಯಾಂಕ್‌ ರಾಜಕೀಯಕ್ಕೆ ತಕ್ಕಂತೆ ನೀತಿಗಳನ್ನು ರೂಪಿಸುತ್ತಿದ್ದರೆ, ಪ್ರಸ್ತುತ ಸರ್ಕಾರವು ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಪುನಃಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳುತ್ತಿದೆ ಎಂದರು.

ನಮ್ಮ ಸರ್ಕಾರವು ಜನರ, ಜನರಿಂದ ಮತ್ತು ಜನರಿಗಾಗಿ ಪ್ರಗತಿಯ ಮಂತ್ರದೊಂದಿಗೆ ಮುನ್ನಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ತಮ್ಮ ಸರ್ಕಾರದ ಬಗ್ಗೆ ಸಂತಸ ವ್ಯಕ್ತಪಡಿಸಿ ಮಾತು ಮುಂದುವರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಹಲವು ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತಿವೆ. ಆದರೆ ಭಾರತದಲ್ಲಿ ಜನರು ಮೂರನೇ ಬಾರಿಗೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಹಿಂದಿನ ಸರ್ಕಾರಗಳು ಚುನಾವಣೆಗಳನ್ನು ಗೆಲ್ಲಲು ನೀತಿಗಳನ್ನು ರೂಪಿಸುತ್ತಿದ್ದವು. ಆದರೆ ನಮ್ಮ ಸರ್ಕಾರ ಜನರ ನಂಬಿಕೆಯನ್ನು ಪುನಃಸ್ಥಾಪಿಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಇದೇ ವೇಳೆ ಭಯೋತ್ಪಾದಕ ದಾಳಿ ಬಗ್ಗೆ ಮಾತನಾಡಿದ ಅವರು, ಭಯೋತ್ಪಾದಕರು ಈಗ ತಮ್ಮ ಮನೆಗಳಲ್ಲೂ ಅಸುರಕ್ಷಿತ ಎಂಬ ಭಾವನೆ ಹೊಂದಿದ್ದಾರೆ. ಈಗ ಸಮಯ ಬದಲಾಗಿದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

3 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

3 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

3 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

4 hours ago

ಗಜಪಯಣಕ್ಕೆ ನಡೆದಿದೆ ಭರದ ಸಿದ್ಧತೆ

ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು  ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…

4 hours ago