ಉತ್ತರಾಖಂಡ: ಇಲ್ಲಿನ ರಿಷಿಕೇಶದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ನರೇಂದ್ರ ಮೋದಿ ದೇಶದಲ್ಲಿ ದೃಢವಿದೆ ಹೀಗಾಗಿ ಭಯೋತ್ಪಾದಕರನ್ನು ಮನೆಗಳಿಗೆ ನುಗ್ಗಿ ಕೊಲ್ಲಲಾಗುತ್ತಿದೆ ಎಂದು ಹೇಳಿದರು.
ದೇಶದ ತ್ರಿವರ್ಣ ಧ್ವಜ ಯುದ್ಧ ವಲಯದಲ್ಲೂ ಭದ್ರತೆಯ ಭರವಸೆಯಾಗುತ್ತಿದೆ. 7 ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಲಾಗಿದೆ. ತ್ರಿವಳಿ ತಲಾಖ್ ವಿರುದ್ಧ ಕಾನೂನು ರಚಿಸಲಾಗಿದೆ, ಸಾರ್ವತ್ರಿಕ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸಿಕ್ಕಿದೆ. ಜತೆಗೆ ಸಾಮಾನ್ಯ ವರ್ಗಕ್ಕೆ ಸೇರಿದ ಬಡವರಿಗೂ ಶೇ.100ರಷ್ಟು ಮೀಸಲಾತಿ ಸಿಕ್ಕಿದೆ ಎಂದು ನರೇಂದ್ರ ಮೋದಿ ತಮ್ಮ ಸರ್ಕಾರ ಮಾಡಿದ ಕೆಲಸಗಳನ್ನು ಮೆಲುಕು ಹಾಕಿದರು.
ಕಳೆದ 10 ವರ್ಷಗಳಲ್ಲಿ ದೇಶವನ್ನು ಮೊದಲಿಗಿಂತಲೂ ಹಲವು ಪಟ್ಟು ಬಲಿಷ್ಠ ಮಾಡಿದ ಸರ್ಕಾರ ಇಂದು ದೇಶದಲ್ಲಿದೆ. ದೇಶದಲ್ಲಿ ದುರ್ಬಲ ಸರ್ಕಾರ ಇದ್ದಾಗೆಲ್ಲಾ ಶತ್ರುಗಳು ಲಾಭ ಮಾಡಿಕೊಂಡಿದ್ದಾರೆ ಮತ್ತು ಭಯೋತ್ಪಾದನೆಯನ್ನು ಹಬ್ಬಿಸಿದ್ದಾರೆ. ಈಗ ಮೋದಿ ಸರ್ಕಾರ ಬಲಿಷ್ಠವಾಗಿದೆ, ಆದ್ದರಿಂದ ಅವರ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲಲಾಗುತ್ತಿದೆ ಎಂದು ಮೋದಿ ಹೇಳಿಕೆ ನೀಡಿದರು.
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…