Mysore
27
clear sky

Social Media

ಭಾನುವಾರ, 19 ಏಪ್ರಿಲ 2026
Light
Dark

ಪಠ್ಯಪಸ್ತಕ ತಿದ್ದುಪಡಿ ಕೇಸರಿಕರಣ ಎನ್ನಲಾಗದು: ಎನ್‌ಸಿಇಆರ್‌ಟಿ

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪಗಳನ್ನು ತಳ್ಳಿಹಾಕಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದರು.

ಹನ್ನೆರಡನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಮೂರು ಗೋಪುರದ ಕಟ್ಟಡವೆಂದು ವರ್ಣಿಸಲಾಗಿದೆ. ಅಯೋಧ್ಯೆಯ ಪಾಠವಿದೆ. ಎಲ್.ಕೆ ಅಡ್ವಾನಿಯವರ ನೇತೃತ್ವದಲ್ಲಿ ನಡೆದ ಬಿಜೆಪಿ ರಥಯಾತ್ರೆಯನ್ನು ಉಲ್ಲೇಖಿಸಲಾಗಿದೆ. ಕರ ಸೇವಕರಿಂದ ಬಾಬ್ರಿ ಮಸೀದಿ ಕೆಡವಲಾಗಿದ್ದು, ಆ ಸಂಬಂಧಿತ ಘಟನೆಗಳ ವಿವರ ಕೊಡಲಾಗಿದೆ ಎಂದು ಹೇಳಿದರು.

ಬಿಜೆಪಿಯ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹಾಗೂ ಬಿಜೆಪಯ ವಿಷಾದಗಳ ವಿಷಯಗಳು ಸೇರಿವೆ. ಮೊಘಲರ ಸಾಧನೆಗಳಿಗೆ ಕತ್ತರಿ ಹಾಕಲಾಗಿದ್ದು, ರಾಮಮಂದಿರ ನಿರ್ಮಾಣ ಹಾಗೂ ಹೊಸ ಸಂಸತ್ ಭವನ ನಿರ್ಮಾಣ ವಿಷಯಗಳು ಸೇರಿಕೊಂಡಿವೆ.

ಯಾವುದಾದರೂ ಅಪ್ರಸ್ತುತ ವಿಷಯವಿದ್ದರೆ ಅದನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ಬದಲಾವಣೆ ಮಾಡಬಾರದು ಎನ್ನಲಾಗುವುದಿಲ್ಲ. ನಾವು ಮಕ್ಕಳಿಗೆ ಇತಿಹಾಸ ಹೇಳಿಕೊಡುವುದು ನೈಜ ಜ್ಞಾನವನ್ನು ತುಂಬಲೇ ಹೊರತು ಘರ್ಷಣೆಗೆ ನೂಕುವುದಕ್ಕಲ್ಲ ಎಂದರು.

ರಾಮಮಂದಿರ, ಹೊಸ ಸಂಸತ್‌ ಭವನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬಾರದೇಕೆ? ಪ್ರಾಚೀನ ಘಟನೆಗಳ ಜೊತೆಗೆ ಇತ್ತೀಚಿನ ವಿದ್ಯಮಾನವನ್ನು ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ದಿನೇಶ್‌ ಪ್ರಸಾದ್‌ ಸಕ್ಲಾನಿ ಸ್ಪಷ್ಟಪಡಿಸಿದ್ದಾರೆ.

ಹೆಚ್‌ಎನ್‌ಬಿ ಗರ್‌ವಾಲ್‌ ವಿವಿಯ ಪುರಾತತ್ವ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ದಿನೇಶ್‌ ಪ್ರಸಾದ್‌ ಅವರನ್ನು 2022 ರಲ್ಲಿ ಎನ್‌ಸಿಇಆರ್‌ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಇವರು ಅಧಿಕಾರ ಸ್ವೀಕರಿಸಿದ ನಂತರ ಪಠ್ಯಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ ಎಂದು ಆರೋಪ ಇವರ ಮೇಲಿದೆ.

Tags:
error: Content is protected !!