ದೇಶ- ವಿದೇಶ

ಪಠ್ಯಪಸ್ತಕ ತಿದ್ದುಪಡಿ ಕೇಸರಿಕರಣ ಎನ್ನಲಾಗದು: ಎನ್‌ಸಿಇಆರ್‌ಟಿ

ನವದೆಹಲಿ: ಶಾಲೆಗಳಲ್ಲಿ ಗಲಭೆ, ಧ್ವಂಸಗಳ ಕುರಿತು ಬೋಧಿಸುವ ಅಗತ್ಯವಿಲ್ಲ. ಆದರೆ ಪಠ್ಯಪುಸ್ತಕ ತಿದ್ದುಪಡಿ ಜಾಗತಿಕ ಬದಲಾವಣೆ, ಪರಿಷ್ಕರಣೆಯನ್ನು ಕೇಸರೀಕರಣ ಎಂದು ಕರೆಯಲಾಗದು ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ(ಎನ್‌ಸಿಈಆರ್‌ಟಿ) ನಿರ್ದೇಶಕ ದಿನೇಶ್‌ ಪ್ರಸಾದ್‌ ಸಕ್ಲಾನಿ ಹೇಳಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಶಾಲಾ ಪಠ್ಯಕ್ರಮದಲ್ಲಿ ಕೇಸರಿಕರಣದ ಆರೋಪಗಳನ್ನು ತಳ್ಳಿಹಾಕಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದರು.

ಹನ್ನೆರಡನೇ ತರಗತಿಯ ರಾಜಕೀಯ ಶಾಸ್ತ್ರದ ಪಠ್ಯಪುಸ್ತಕದಲ್ಲಿ ಬಾಬ್ರಿ ಮಸೀದಿಯನ್ನು ಮೂರು ಗೋಪುರದ ಕಟ್ಟಡವೆಂದು ವರ್ಣಿಸಲಾಗಿದೆ. ಅಯೋಧ್ಯೆಯ ಪಾಠವಿದೆ. ಎಲ್.ಕೆ ಅಡ್ವಾನಿಯವರ ನೇತೃತ್ವದಲ್ಲಿ ನಡೆದ ಬಿಜೆಪಿ ರಥಯಾತ್ರೆಯನ್ನು ಉಲ್ಲೇಖಿಸಲಾಗಿದೆ. ಕರ ಸೇವಕರಿಂದ ಬಾಬ್ರಿ ಮಸೀದಿ ಕೆಡವಲಾಗಿದ್ದು, ಆ ಸಂಬಂಧಿತ ಘಟನೆಗಳ ವಿವರ ಕೊಡಲಾಗಿದೆ ಎಂದು ಹೇಳಿದರು.

ಬಿಜೆಪಿಯ ಆಡಳಿತದ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹಾಗೂ ಬಿಜೆಪಯ ವಿಷಾದಗಳ ವಿಷಯಗಳು ಸೇರಿವೆ. ಮೊಘಲರ ಸಾಧನೆಗಳಿಗೆ ಕತ್ತರಿ ಹಾಕಲಾಗಿದ್ದು, ರಾಮಮಂದಿರ ನಿರ್ಮಾಣ ಹಾಗೂ ಹೊಸ ಸಂಸತ್ ಭವನ ನಿರ್ಮಾಣ ವಿಷಯಗಳು ಸೇರಿಕೊಂಡಿವೆ.

ಯಾವುದಾದರೂ ಅಪ್ರಸ್ತುತ ವಿಷಯವಿದ್ದರೆ ಅದನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ಬದಲಾವಣೆ ಮಾಡಬಾರದು ಎನ್ನಲಾಗುವುದಿಲ್ಲ. ನಾವು ಮಕ್ಕಳಿಗೆ ಇತಿಹಾಸ ಹೇಳಿಕೊಡುವುದು ನೈಜ ಜ್ಞಾನವನ್ನು ತುಂಬಲೇ ಹೊರತು ಘರ್ಷಣೆಗೆ ನೂಕುವುದಕ್ಕಲ್ಲ ಎಂದರು.

ರಾಮಮಂದಿರ, ಹೊಸ ಸಂಸತ್‌ ಭವನದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬಾರದೇಕೆ? ಪ್ರಾಚೀನ ಘಟನೆಗಳ ಜೊತೆಗೆ ಇತ್ತೀಚಿನ ವಿದ್ಯಮಾನವನ್ನು ಮಕ್ಕಳಿಗೆ ತಿಳಿಸುವುದು ನಮ್ಮ ಕರ್ತವ್ಯ ಎಂದು ದಿನೇಶ್‌ ಪ್ರಸಾದ್‌ ಸಕ್ಲಾನಿ ಸ್ಪಷ್ಟಪಡಿಸಿದ್ದಾರೆ.

ಹೆಚ್‌ಎನ್‌ಬಿ ಗರ್‌ವಾಲ್‌ ವಿವಿಯ ಪುರಾತತ್ವ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ದಿನೇಶ್‌ ಪ್ರಸಾದ್‌ ಅವರನ್ನು 2022 ರಲ್ಲಿ ಎನ್‌ಸಿಇಆರ್‌ಟಿ ಮುಖ್ಯಸ್ಥರನ್ನಾಗಿ ನೇಮಿಸಲಾಯಿತು. ಇವರು ಅಧಿಕಾರ ಸ್ವೀಕರಿಸಿದ ನಂತರ ಪಠ್ಯಗಳಲ್ಲಿ ಹಲವು ಬದಲಾವಣೆ ಮಾಡಲಾಗಿದೆ ಎಂದು ಆರೋಪ ಇವರ ಮೇಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

47 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

57 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago